ಪತ್ರಿಕಾಗೋಷ್ಠಿಯಲ್ಲಿ ಮೊಹಮ್ಮದ್ ಖುರೇಷಿ, ಜಿಗಣಿ ಶಂಕರ್ ಮತ್ತಿತರರು ಹಾಜಿರಿದ್ದರು. 
ಜಿಲ್ಲಾ ಸುದ್ದಿ

ಅಂಬೇಡ್ಕರ್ ಮೊಮ್ಮಗನ ಮೇಲೆ ಹಲ್ಲೆ ಖಂಡಿಸಿ ದಲಿತರ ಪ್ರತಿಭಟನೆ

ಮಹಾರಾಷ್ಟ್ರ ರಾಯಗಡ್ ಬಳಿ ಇರುವ ಮಹಡ್ ನಗರದಲ್ಲಿ ಡಾ.ಬಿಆರ್ ಅಂಬೇಡ್ಕರ್ ಅವರ ಮೊಮ್ಮಗ ಆನಂದ್ ರಾಜ್ ಅಂಬೇಡ್ಕರ್ ಅವರ ಮೇಲೆ ಹಲ್ಲೆ ಖಂಡಿಸಿ...

ಬೆಂಗಳೂರು: ಮಹಾರಾಷ್ಟ್ರ ರಾಯಗಡ್ ಬಳಿ ಇರುವ ಮಹಡ್ ನಗರದಲ್ಲಿ ಡಾ.ಬಿಆರ್ ಅಂಬೇಡ್ಕರ್ ಅವರ ಮೊಮ್ಮಗ ಆನಂದ್ ರಾಜ್ ಅಂಬೇಡ್ಕರ್ ಅವರ ಮೇಲೆ ಹಲ್ಲೆ ಖಂಡಿಸಿ ರಾಜ್ಯದ ವಿವಿಧ ದಲಿತ ಸಂಘಟನೆಗಳು ಪ್ರತಿಭಟನೆ ಕೈಗೊಂಡಿವೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಲಿತ ಮುಖಂಡ ಜಿಗಣಿ ಶಂಕರ್, ದಲಿತರ ಮೇಲಿನ ದೌರ್ಜನ್ಯ ನಿರಂತರವಾಗಿ ನಡೆಯುತ್ತಿದೆ. ದೇಶದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಕುಟಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯವಾಗಿದೆ. ಬಿಜೆಪಿ ಮತ್ತು ಶಿವಸೇನಾ ನಿರಂತರವಾಗಿ ದಲಿತರ ಮೇಲೆ ಹಲ್ಲೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ಶಿವಸೇನೆ ಶಾಸಕ ಗೋಕಲೆ ಮತ್ತು ವಿಕಾಸ್ ಗೋಕಲೆ ಅವರು ಆನಂದ್ ರಾಜ್ ಅಂಬೇಡ್ಕರ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು, ಅಲ್ಲಿನ ಮಹರಾಷ್ಟ್ರ ಸರ್ಕಾರ ಯಾವುದೇ ರೀತಿಯ ಕ್ರಮಕೈಗೊಳ್ಳದಿರುವುದು ವಿಷಾಧನೀಯ ಎಂದ ಅವರು ಈ ಹಲ್ಲೆಯನ್ನು ಖಂಡಿಸಿ ರಿಪಬ್ಲಿಕ್ ಸೇನೆ, ಕರ್ನಾಟಕ ಜನಾಂದೋಲನ ಸಂಘಟನೆ, ಕರ್ನಾಟಕ ಸಂರಕ್ಷಣಾ ಸಮಿತಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ ಎಂದಿದ್ದಾರೆ.

ಜುಲೈ 6ರಂದು ವಿವಿಧ ಸಂಘಟನೆಗಳ ವತಿಯಿಂದ ಅಂಬೇಡ್ಕರ್ ಕುಟುಂಬದ ಮೇಲಿನ ಹಲ್ಲೆಯನ್ನು ಖಂಡಿಸಿ ಹೋಸಕೋಟೆ ತಾಲ್ಲೂಕು ತಹಸೀಲ್ದಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT