ದರೋಡೆ(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಬೈಕ್ ಗುದ್ದಿಸಿ ಏಳು ಲಕ್ಷ ದೋಚಿ ಪರಾರಿ

ಖಾಸಗಿ ಕಂಪನಿ ಉದ್ಯೋಗಿಯ ಬೈಕ್ ಗೆ ಮತ್ತೊಂದು ಬೈಕ್ ಗುದ್ದಿದ ದುಷ್ಕರ್ಮಿಗಳಿಬ್ಬರು 7 ಲಕ್ಷರೂಪಾಯಿಗಳನ್ನು ದೋಚಿದ್ದಾರೆ.

ಬೆಂಗಳೂರು: ವಿವಿಧ ಮಳಿಗೆ ಹಾಗೂ ಶೋರೂಂಗಳಿಂದ ಹಣ ಸಂಗ್ರಹಿಸುತ್ತಿದ್ದ ಖಾಸಗಿ ಕಂಪನಿ ಉದ್ಯೋಗಿಯ ಬೈಕ್ ಗೆ ಮತ್ತೊಂದು ಬೈಕ್ ಗುದ್ದಿದ ದುಷ್ಕರ್ಮಿಗಳಿಬ್ಬರು 7 ಲಕ್ಷರೂಪಾಯಿಗಳನ್ನು ದೋಚಿರುವ ಘಟನೆ ಯಲಹಂಕದ ಸಮೀಪದ ಚಿಕ್ಕಬೊಮ್ಮಸಂದ್ರದಲ್ಲಿ ನಡೆದಿದೆ.

ದಾಸರಹಳ್ಳಿ ನಿವಾಸಿ ಶ್ರೀಕಾಂತ ಹಣ ಕಳೆದುಕೊಂಡವರು. ಮಳಿಗೆಗಳು ಹಾಗೂ ಶೋರೂಂಗಳಿಂದ ಹಣ ಸಂಗ್ರಹಿಸಿ ಅದನ್ನು ಬ್ಯಾಂಕ್ ಗೆ ಡೆಪಾಸಿಟ್ ಮಾಡುತ್ತಿದ್ದರು. 7 ಲಕ್ಷ ಹಣವನ್ನು ಬ್ಯಾಂಕ್ ಗೆ ಡೆಪಾಸಿಟ್ ಮಾಡಲು ಹೋಗುತ್ತಿರಬೇಕಾದರೆ ಹಿಂದಿನಿಂದ ಬಂದ ಬೈಕ್ ವೊಂದು ಶ್ರೀಕಾಂತ್ ಅವರ ಬೈಕ್ ಗೆ ಗುದ್ದಿದೆ. ಕೆಳಗೆ ಬಿದ್ದ ಶ್ರೀಕಾಂತ್ ಅವರಿಂದ ಬ್ಯಾಗ್ ಕಿತ್ತುಕೊಂಡ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬೈಕ್ ನ ನೋಂದಣಿ ಸಂಖ್ಯೆಯನ್ನು ಗಮನಿಸಲು ಸಾಧ್ಯವಾಗಲಿಲ್ಲ ಎಂದು ಶ್ರೀಕಾಂತ್ ಪೊಲೀಸರಿಗೆ ತಿಳಿಸಿದ್ದಾರೆ.

ಹಣ ಸಾಗಣೆ ವಿಷಯ ತಿಳಿದವರೇ ಕೃತ್ಯ ಎಸಗಿರುವ ಸಾಧ್ಯತೆ ಇದ್ದು ಸಂಸ್ಥೆಯಲ್ಲಿ ಈ ಹಿಂದೆ ಕೆಲಸ ಮಾಡಿದವರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಯಲಹಂಕ ಉಪನಗರ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT