ದರೋಡೆ(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಬೈಕ್ ಗುದ್ದಿಸಿ ಏಳು ಲಕ್ಷ ದೋಚಿ ಪರಾರಿ

ಖಾಸಗಿ ಕಂಪನಿ ಉದ್ಯೋಗಿಯ ಬೈಕ್ ಗೆ ಮತ್ತೊಂದು ಬೈಕ್ ಗುದ್ದಿದ ದುಷ್ಕರ್ಮಿಗಳಿಬ್ಬರು 7 ಲಕ್ಷರೂಪಾಯಿಗಳನ್ನು ದೋಚಿದ್ದಾರೆ.

ಬೆಂಗಳೂರು: ವಿವಿಧ ಮಳಿಗೆ ಹಾಗೂ ಶೋರೂಂಗಳಿಂದ ಹಣ ಸಂಗ್ರಹಿಸುತ್ತಿದ್ದ ಖಾಸಗಿ ಕಂಪನಿ ಉದ್ಯೋಗಿಯ ಬೈಕ್ ಗೆ ಮತ್ತೊಂದು ಬೈಕ್ ಗುದ್ದಿದ ದುಷ್ಕರ್ಮಿಗಳಿಬ್ಬರು 7 ಲಕ್ಷರೂಪಾಯಿಗಳನ್ನು ದೋಚಿರುವ ಘಟನೆ ಯಲಹಂಕದ ಸಮೀಪದ ಚಿಕ್ಕಬೊಮ್ಮಸಂದ್ರದಲ್ಲಿ ನಡೆದಿದೆ.

ದಾಸರಹಳ್ಳಿ ನಿವಾಸಿ ಶ್ರೀಕಾಂತ ಹಣ ಕಳೆದುಕೊಂಡವರು. ಮಳಿಗೆಗಳು ಹಾಗೂ ಶೋರೂಂಗಳಿಂದ ಹಣ ಸಂಗ್ರಹಿಸಿ ಅದನ್ನು ಬ್ಯಾಂಕ್ ಗೆ ಡೆಪಾಸಿಟ್ ಮಾಡುತ್ತಿದ್ದರು. 7 ಲಕ್ಷ ಹಣವನ್ನು ಬ್ಯಾಂಕ್ ಗೆ ಡೆಪಾಸಿಟ್ ಮಾಡಲು ಹೋಗುತ್ತಿರಬೇಕಾದರೆ ಹಿಂದಿನಿಂದ ಬಂದ ಬೈಕ್ ವೊಂದು ಶ್ರೀಕಾಂತ್ ಅವರ ಬೈಕ್ ಗೆ ಗುದ್ದಿದೆ. ಕೆಳಗೆ ಬಿದ್ದ ಶ್ರೀಕಾಂತ್ ಅವರಿಂದ ಬ್ಯಾಗ್ ಕಿತ್ತುಕೊಂಡ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬೈಕ್ ನ ನೋಂದಣಿ ಸಂಖ್ಯೆಯನ್ನು ಗಮನಿಸಲು ಸಾಧ್ಯವಾಗಲಿಲ್ಲ ಎಂದು ಶ್ರೀಕಾಂತ್ ಪೊಲೀಸರಿಗೆ ತಿಳಿಸಿದ್ದಾರೆ.

ಹಣ ಸಾಗಣೆ ವಿಷಯ ತಿಳಿದವರೇ ಕೃತ್ಯ ಎಸಗಿರುವ ಸಾಧ್ಯತೆ ಇದ್ದು ಸಂಸ್ಥೆಯಲ್ಲಿ ಈ ಹಿಂದೆ ಕೆಲಸ ಮಾಡಿದವರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಯಲಹಂಕ ಉಪನಗರ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT