ಪತ್ರಿಕಾಗೋಷ್ಠಿಯಲ್ಲಿ ರಫಾಯಲ್ ರಾಜ್, ರೀಟಾ ಜೋಸೆಫ್, ಉದಯಕುಮಾರ್ ಮತ್ತಿತರರು ಹಾಜರಿದ್ದರು. 
ಜಿಲ್ಲಾ ಸುದ್ದಿ

ಟಿ.ಜೆ. ಅಬ್ರಹಾಂ ಬಂಧನಕ್ಕೆ ಆಗ್ರಹ

ಸಾಹಿತಿಗಳನ್ನು ಹಾಗೂ ಕ್ರೈಸ್ತ ಧರ್ಮಾಧಿಕಾರಿಗಳನ್ನು ಏಕವಚನದಲ್ಲಿ ವಾಕ್ ಪ್ರಹಾರ ನಡೆಸಿದ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹ್ಯಾಂ...

ಬೆಂಗಳೂರು: ಸಾಹಿತಿಗಳನ್ನು ಹಾಗೂ ಕ್ರೈಸ್ತ ಧರ್ಮಾಧಿಕಾರಿಗಳನ್ನು ಏಕವಚನದಲ್ಲಿ ವಾಕ್ ಪ್ರಹಾರ ನಡೆಸಿದ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರನ್ನು ಬಂಧಿಸುವಂತೆ ಸರ್ಕಾರ ಆದೇಶ ಹೊರಡಿಸಬೇಕು ಎಂದು ಅಖಿಲ ಕರ್ನಾಟಕ ಕಥೋಲಿಕ ಕ್ರೈಸ್ತರ ಕನ್ನಡ ಸಂಘ ಆಗ್ರಹಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ರಫಾಯಲ್ ರಾಜ್, ಕನ್ನಡ ಕ್ರೈಸ್ತರ ಹೋರಾಟವನ್ನು ಹತ್ತಿಕ್ಕುವ ಹುನ್ನಾರ ನಡೆಸಲಾಗುತ್ತಿದೆ. ಟಿ.ಜೆ ಅಬ್ರಹಾಂ  ಅವರ ಕನ್ನಡ ಕ್ರೈಸ್ತ ವಿರೋಧವಾಗಿ ಮಾತುಗಳನ್ನಾಡುತ್ತಾ ಬರುತ್ತಿದ್ದು, ಇತ್ತೆಚೆಗಷ್ಟೇ ಹಿರಿಯ ಸಾಹಿತಿಗಳನ್ನು, ಕನ್ನಡ ಸಂಘಟನೆಗಳ ಮುಖಂಡರನ್ನು ಏಕವಚನದಲ್ಲಿ ಸಂಭೋಧಿಸಿದ್ದಾರೆ ಎಂದು ಕಿಡಿಕಾರಿದರು.

ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರು ಕನ್ನಡ ಕ್ರೈಸ್ತರಿಂದ ಹಣ ಪಡೆದು ಮಾತನಾಡುತ್ತಿದ್ದಾರೆ ಎಂದು ಅಬ್ರಹಾಂ ಆರೋಪಿಸಿದ್ದಾರೆ. ಅವರ ಆರೋಪ ನಿಜವಾಗಿದ್ದರೇ, ಅಬ್ರಹಾಂ ಅವರು ಕೂಡಲೇ ಆರೋಪಕ್ಕೆ ಸಂಬಂಧ ಪಟ್ಟ ದಾಖಲೆಗಳನ್ನು ಬಹಿರಂಗಪಡಿಸಲಿ ಎಂದ ಅವರು, ಟಿಜೆ ಅಬ್ರಹಾಂ ಅವರು ಕೇರಳದವರಾಗಿದ್ದು, ಕನ್ನಡ ಕ್ರೈಸ್ತರನ್ನು ಹತ್ತಿಕ್ಕುವ ಹುನ್ನಾರ ನಡೆಸುತ್ತಿದ್ದಾರೆ ಎಂದು ದೂರಿದ್ದಾರೆ.

ಸರ್ಕಾರ ಎಲ್ಲಾ ಚರ್ಚಗಳಲ್ಲಿ ಪೂಜೆ ಕಾರ್ಯಕ್ರಮವನ್ನು ಕನ್ನಡದಲ್ಲೇ ಕಡ್ಡಾಯಗೊಳಿಸಬೇಕು ಹಾಗೂ ಕನ್ನಡದವರ ಬಗ್ಗೆ ಟೀಕಿಸಿದಂತ ಅಬ್ರಾಹ್ಯಂ ಬಂಧನಕ್ಕೆ ಆದೇಶಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಬಿಜೆಪಿ, ಜೆಡಿಎಸ್ ನಿಂದ ಸದನದಲ್ಲಿ ಅಹೋರಾತ್ರಿ ಧರಣಿ

2026ರ ಐಪಿಎಲ್ ಗಾಗಿ RCB ಜೆರ್ಸಿ ಅನಾವರಣ; ಹೊಸ ಋತುವಿಗೆ ವಿಶಿಷ್ಟ ಲೋಗೋ, ಸ್ಟಾರ್ ಪ್ರತ್ಯಕ್ಷ!

Rottweiler ನಾಯಿ ದಾಳಿ: ಬರೊಬ್ಬರಿ 8 ಗಂಟೆ ಶಸ್ತ್ರಚಿಕಿತ್ಸೆ, 80 ಹೊಲಿಗೆ... ಕೊನೆಗೂ ಮಾಲೀಕ ಅರೆಸ್ಟ್! Video

ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದ ಶ್ಲಾಘಿಸಿದ ಪಿಯೂಷ್ ಗೋಯಲ್; ಭಾರತದ ಉಜ್ವಲ ಭವಿಷ್ಯಕ್ಕೆ ಇದು ಶುಭ ಸೂಚನೆ

Indian Stock Market: 2ನೇ ದಿನವೂ ಮಹಾ ಏರಿಕೆ; ಕೇವಲ 15 ನಿಮಿಷದಲ್ಲಿ ಹೂಡಿಕೆದಾರರ ಸಂಪತ್ತು 13 ಲಕ್ಷ ಕೋಟಿ ರೂ ವೃದ್ಧಿ!

SCROLL FOR NEXT