ಪತ್ರಿಕಾಗೋಷ್ಠಿಯಲ್ಲಿ ರಫಾಯಲ್ ರಾಜ್, ರೀಟಾ ಜೋಸೆಫ್, ಉದಯಕುಮಾರ್ ಮತ್ತಿತರರು ಹಾಜರಿದ್ದರು. 
ಜಿಲ್ಲಾ ಸುದ್ದಿ

ಟಿ.ಜೆ. ಅಬ್ರಹಾಂ ಬಂಧನಕ್ಕೆ ಆಗ್ರಹ

ಸಾಹಿತಿಗಳನ್ನು ಹಾಗೂ ಕ್ರೈಸ್ತ ಧರ್ಮಾಧಿಕಾರಿಗಳನ್ನು ಏಕವಚನದಲ್ಲಿ ವಾಕ್ ಪ್ರಹಾರ ನಡೆಸಿದ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹ್ಯಾಂ...

ಬೆಂಗಳೂರು: ಸಾಹಿತಿಗಳನ್ನು ಹಾಗೂ ಕ್ರೈಸ್ತ ಧರ್ಮಾಧಿಕಾರಿಗಳನ್ನು ಏಕವಚನದಲ್ಲಿ ವಾಕ್ ಪ್ರಹಾರ ನಡೆಸಿದ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರನ್ನು ಬಂಧಿಸುವಂತೆ ಸರ್ಕಾರ ಆದೇಶ ಹೊರಡಿಸಬೇಕು ಎಂದು ಅಖಿಲ ಕರ್ನಾಟಕ ಕಥೋಲಿಕ ಕ್ರೈಸ್ತರ ಕನ್ನಡ ಸಂಘ ಆಗ್ರಹಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ರಫಾಯಲ್ ರಾಜ್, ಕನ್ನಡ ಕ್ರೈಸ್ತರ ಹೋರಾಟವನ್ನು ಹತ್ತಿಕ್ಕುವ ಹುನ್ನಾರ ನಡೆಸಲಾಗುತ್ತಿದೆ. ಟಿ.ಜೆ ಅಬ್ರಹಾಂ  ಅವರ ಕನ್ನಡ ಕ್ರೈಸ್ತ ವಿರೋಧವಾಗಿ ಮಾತುಗಳನ್ನಾಡುತ್ತಾ ಬರುತ್ತಿದ್ದು, ಇತ್ತೆಚೆಗಷ್ಟೇ ಹಿರಿಯ ಸಾಹಿತಿಗಳನ್ನು, ಕನ್ನಡ ಸಂಘಟನೆಗಳ ಮುಖಂಡರನ್ನು ಏಕವಚನದಲ್ಲಿ ಸಂಭೋಧಿಸಿದ್ದಾರೆ ಎಂದು ಕಿಡಿಕಾರಿದರು.

ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರು ಕನ್ನಡ ಕ್ರೈಸ್ತರಿಂದ ಹಣ ಪಡೆದು ಮಾತನಾಡುತ್ತಿದ್ದಾರೆ ಎಂದು ಅಬ್ರಹಾಂ ಆರೋಪಿಸಿದ್ದಾರೆ. ಅವರ ಆರೋಪ ನಿಜವಾಗಿದ್ದರೇ, ಅಬ್ರಹಾಂ ಅವರು ಕೂಡಲೇ ಆರೋಪಕ್ಕೆ ಸಂಬಂಧ ಪಟ್ಟ ದಾಖಲೆಗಳನ್ನು ಬಹಿರಂಗಪಡಿಸಲಿ ಎಂದ ಅವರು, ಟಿಜೆ ಅಬ್ರಹಾಂ ಅವರು ಕೇರಳದವರಾಗಿದ್ದು, ಕನ್ನಡ ಕ್ರೈಸ್ತರನ್ನು ಹತ್ತಿಕ್ಕುವ ಹುನ್ನಾರ ನಡೆಸುತ್ತಿದ್ದಾರೆ ಎಂದು ದೂರಿದ್ದಾರೆ.

ಸರ್ಕಾರ ಎಲ್ಲಾ ಚರ್ಚಗಳಲ್ಲಿ ಪೂಜೆ ಕಾರ್ಯಕ್ರಮವನ್ನು ಕನ್ನಡದಲ್ಲೇ ಕಡ್ಡಾಯಗೊಳಿಸಬೇಕು ಹಾಗೂ ಕನ್ನಡದವರ ಬಗ್ಗೆ ಟೀಕಿಸಿದಂತ ಅಬ್ರಾಹ್ಯಂ ಬಂಧನಕ್ಕೆ ಆದೇಶಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT