ವಿದ್ಯಾರ್ಥಿನಿ ಜತೆ ಅಸಭ್ಯವರ್ತನೆ: ಬಂಧನ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ವಿದ್ಯಾರ್ಥಿನಿ ಜತೆ ಅಸಭ್ಯವರ್ತನೆ: ಬಂಧನ

ವೈದ್ಯಕೀಯ ವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಸಾರ್ವಜನಿಕರು ಥಳಿಸಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಮಂಗಳವಾರ ರಾತ್ರಿ ಮತ್ತಿಕೆರೆಯಲ್ಲಿ ನಡೆದಿದೆ...

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಸಾರ್ವಜನಿಕರು ಥಳಿಸಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಮಂಗಳವಾರ ರಾತ್ರಿ ಮತ್ತಿಕೆರೆಯಲ್ಲಿ ನಡೆದಿದೆ.

ನೇಪಾಳ ಮೂಲದ ಸಾಮ್ರಾಟ್ ಸಿಂಗ್ (21) ಬಂಧಿತ. 3 ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ಆರೋಪಿ, ಶ್ರೀರಾಂಪುರದಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು ಪತ್ನಿ ಜತೆ ಶ್ರೀರಾಂಪುರದಲ್ಲೇ ವಾಸವಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮತ್ತಿಕೆರೆಯಲ್ಲಿನ ಸ್ನೇಹಿತನ ಮನೆಗೆ ಹೋಗಿದ್ದ ಸಾಮ್ರಾಟ್ ಸಿಂಗ್, ಮದ್ಯಪಾನ ಮಾಡಿ ಹೊರಗೆ ಬಂದಿದ್ದಾನೆ. ರಾತ್ರಿ 10ರ ಸುಮಾರಿಗೆ ರಾಮಯ್ಯ ಕಾಲೇಜು ಸಮೀಪದ ಪೈಪ್‍ಲೈನ್ ರಸ್ತೆಯಲ್ಲಿ 23 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಊಟಕ್ಕೆ ಸಮೀಪದ ರೆಸ್ಟೋರೆಂಟ್‍ಗೆ ಹೋಗುತ್ತಿದ್ದರು.

ಆಕೆಯನ್ನು ಅಡ್ಡಗಟ್ಟಿದ ಆರೋಪಿ, ಪ್ಯಾಂಟ್ ಜಿಪ್ ತೆಗೆದು ಅಸಭ್ಯವಾಗಿ ವರ್ತಿಸಿದ್ದ. ಭೀತಿಗೊಂಡ ಯುವತಿ ತಪ್ಪಿಸಿಕೊಂಡು ಓಡಿದರೂ ಹಿಂದೆ ಬಂದು ತಬ್ಬಿಕೊಳ್ಳಲು ಯತ್ನಿಸಿದ್ದ. ಆರೋಪಿ ಕಪಾಳಕ್ಕೆ ಹೊಡೆದ ಯುವತಿ ಕಿರುಚಿದ್ದಾಳೆ. ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸುತ್ತಿದ್ದಂತೆ ಪರಾರಿಯಾಗಲು ಯತ್ನಿಸಿದ್ದ. ಬೆನ್ನತ್ತಿ ಹಿಡಿದ ಸಾರ್ವಜನಿಕರು ಥಳಿಸಿ ಸದಾಶಿವನಗರ ಪೊಲೀಸರ ವಶಕ್ಕೆ ನೀಡಿದ್ದಾರೆ.

ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಸಂದೀಪ್‍ಪಾಟೀಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT