ಕೆಸಿಡಿಸಿಯಲ್ಲಿ ಬಾಲಕ ಸಾವು ನಾಲ್ವರು ಸಿಬ್ಬಂದಿ ಬಂಧನ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಕೆಸಿಡಿಸಿಯಲ್ಲಿ ಬಾಲಕ ಸಾವು ನಾಲ್ವರು ಸಿಬ್ಬಂದಿ ಬಂಧನ

ಕರ್ನಾಟಕ ಸಾವಯವ ಗೊಬ್ಬರ ಅಭಿವೃದ್ಧಿ ನಿಗಮ (ಕೆಸಿಡಿಸಿ) ಕಾರ್ಖಾನೆ ಆವರಣದಲ್ಲಿ ಬಾಲಕ ನರಸಿಂಹಮೂರ್ತಿ (10) ಸಾವಿನ ಪ್ರಕರಣ ಸಂಬಂಧ ಕಾರ್ಖಾನೆಯ ನಾಲ್ವರನ್ನು ಎಚ್ಎಸ್‍ಆರ್ ಬಡಾವಣೆ ಪೊಲೀಸರು ಬಂಧಿಸಿದ್ದಾರೆ...

ಬೆಂಗಳೂರು: ಕರ್ನಾಟಕ ಸಾವಯವ ಗೊಬ್ಬರ ಅಭಿವೃದ್ಧಿ ನಿಗಮ (ಕೆಸಿಡಿಸಿ) ಕಾರ್ಖಾನೆ ಆವರಣದಲ್ಲಿ ಬಾಲಕ ನರಸಿಂಹಮೂರ್ತಿ (10) ಸಾವಿನ ಪ್ರಕರಣ ಸಂಬಂಧ ಕಾರ್ಖಾನೆಯ ನಾಲ್ವರನ್ನು ಎಚ್ಎಸ್‍ಆರ್ ಬಡಾವಣೆ ಪೊಲೀಸರು ಬಂಧಿಸಿದ್ದಾರೆ.

ಕಾರ್ಖಾನೆಯ ಆಡಳಿತ ಮಂಡಳಿ ನಿರ್ಲಕ್ಷ್ಯದಿಂದ ಬಾಲಕನ ಸಾವು ಸಂಭವಿಸಿದೆ. ಹೀಗಾಗಿ ಉತ್ಪಾದನಾ ವಿಭಾಗದ ವ್ಯವಸ್ಥಾಪಕ ನಾಗರಾಜ್, ಮೇಲ್ವಿಚಾರಕ ಮುನಿರಾಜು, ಕಸ ಸಂಸ್ಕರಣ ಯಂತ್ರದ ಆಪರೇಟರ್ ಧರ್ಮೇಂದ್ರ ಹಾಗೂ ಜೆಸಿಬಿ ಆಪರೇಟರ್ ಬಸುದೇಬ್‍ರಾಯ್ ಎಂಬುವರನ್ನು ಬಂಧಿಸಲಾಗಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಸೇಪಟ್ ತಿಳಿಸಿದರು.

ಬಾಲಕನ ತಲೆ, ಕಾಲು ಹಾಗೂ ಮರ್ಮಾಂಗಕ್ಕೆ ಗಾಯಗಳಾಗಿದ್ದವು. ಜತೆಗೆ ಮೂಳೆ ಮುರಿತಗೊಂಡಿದೆ. ಆತ ಕಸ ಸಂಸ್ಕರಣ ಯಂತ್ರಕ್ಕೆ ಸಿಲುಕಿ ಮೃತಪಟ್ಟಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಶವಪರೀಕ್ಷೆ ಅಂತಿಮ ವರದಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ಹೇಳಿದರು.

ಸೋಮಸುಂದರಹಳ್ಯ ಸಮೀಪದ ಕೆಸಿಡಿಸಿ ಸಮೀಪದ ಶೆಡ್‍ನಲ್ಲಿ ತಾಯಿ ಜತೆ ನೆಲೆಸಿದ್ದ ಬಾಲಕ, ಗುರುವಾರ ಮಧ್ಯಾಹ್ನ ಕಾರ್ಖಾನೆ ಆವರಣದಲ್ಲಿರುವ ಕಸ ಸಂಸ್ಕರಣಯಂತ್ರದ ಬಳಿ ಶವವಾಗಿ ಪತ್ತೆಯಾಗಿದ್ದ. ಕಾರ್ಖಾನೆ ಸಿಬ್ಬಂದಿಯ ದೌರ್ಜನ್ಯದಿಂದ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಬಾಲಕನ ತಾಯಿ ವರಲಕ್ಷ್ಮೀ ದೂರು ಕೊಟ್ಟಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT