ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಸ್ಮಶಾನಗಳಲ್ಲಿ ಸ್ವಚ್ಛತಾ ಕಾರ್ಯ

ಸ್ಮಶಾನಗಳಲ್ಲಿ ಸ್ವಚ್ಛತೆ ಕಾಪಾಡಲು ಮುಂದಿನ ಶನಿವಾರ ಸಾಮೂಹಿಕ ಸ್ವಚ್ಛತಾ ಅಭಿಯಾನ ನಡೆಸಲಾಗುವುದು ಎಂದು ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ. ವಿಜಯ್ ಭಾಸ್ಕರ್ ತಿಳಿಸಿದರು...

ಬೆಂಗಳೂರು: ಸ್ಮಶಾನಗಳಲ್ಲಿ ಸ್ವಚ್ಛತೆ ಕಾಪಾಡಲು ಮುಂದಿನ ಶನಿವಾರ ಸಾಮೂಹಿಕ ಸ್ವಚ್ಛತಾ ಅಭಿಯಾನ ನಡೆಸಲಾಗುವುದು ಎಂದು ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ. ವಿಜಯ್ ಭಾಸ್ಕರ್ ತಿಳಿಸಿದರು.

ಜಗಜೀವನ್ ರಾಂ ನಗರದಲ್ಲಿ ಶನಿವಾರ ನಡೆದ 'ತೀವ್ರ ಸ್ವಚ್ಛತಾ ಅಭಿಯಾನ'ದಲ್ಲಿ ಸ್ಥಳೀಯರು, ಸ್ಮಶಾನದಲ್ಲಿ ತ್ಯಾಜ್ಯ ಹೆಚ್ಚಿರುವುದರ ಬಗ್ಗೆ ದೂರಿದರು. ಸ್ಮಶಾನದಲ್ಲಿ ತ್ಯಾಜ್ಯ ಹೆಚ್ಚಿದ್ದು, ಕಸ ಸುರಿಯಲು ಬಳಸಲಾಗುತ್ತಿದೆ. ಕೆಲವೊಮ್ಮೆ ಅನಾಥ ಶವಗಳಿಗೆ ಅಂತ್ಯಸಂಸ್ಕಾರ ನಡೆಸದೆ ಸ್ಮಶಾನದ ಆವರಣದೊಳಕ್ಕೆ ಎಸೆಯಲಾಗುತ್ತದೆ. ಶವಗಳನ್ನು ಹೂಳದೆ ಅಥವಾ ಸುಡದಿರುವುದರಿಂದ ದುರ್ವಾಸನೆ ಹೆಚ್ಚಿದ್ದು, ಮಾಲಿನ್ಯ ಉಂಟಾಗುತ್ತಿದೆ. ಕಳೆಗಿಡಗಳು ಸಾಕಷ್ಟು ಬೆಳೆದಿದ್ದು, ಇದು ಅಕ್ರಮ ಚಟುವಟಿಕೆಗಳಿಗೂ ಕಾರಣವಾಗಿದೆ. ಸ್ಮಶಾನವನ್ನು ಸ್ವಚ್ಛ ಮಾಡಲು ಅಧಿಕಾರಿಗಳಿಗೆ ತಿಳಿಸಿದರೂ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ದೂರಿದರು.

ಸ್ಥಳೀಯರಿಗೆ ಪ್ರತಿಕ್ರಿಯಿಸಿದ ಆಡಳಿತಾಧಿಕಾರಿ ವಿಜಯ್ ಭಾಸ್ಕರ್, ಮುಂದಿನ ವಾರ ಬಿಬಿಎಂಪಿ ವ್ಯಾಪ್ತಿಯ ಎಲ್ಲ ಸ್ಮಶಾನಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಗುವುದು. ಹೆಚ್ಚಿನ ಸ್ಮಶಾನಗಳಲ್ಲಿ ಸ್ವಚ್ಛತೆ ಕಾಪಾಡುತ್ತಿಲ್ಲ ಎಂದು ಸಾರ್ವಜನಿಕರಿಂದ ದೂರುಗಳು ಬಂದಿದ್ದು, ಸ್ವಚ್ಛ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT