ಜಿಲ್ಲಾ ಸುದ್ದಿ

ಮಾರ್ಚ್ ಅಂತ್ಯಕ್ಕೆ ಕೃಷಿಗೆ 57 .853 ಕೋಟಿ ಸಾಲ

ರಾಜ್ಯದ ಆದ್ಯತಾ ರಂಗಗಳ ಬೇಡಿಕೆಗೆ ಅನುಸಾರವಾಗಿ 2015 ಮಾರ್ಚ್ ಅಂತ್ಯದ ವೇಳೆಗೆ 10 ,00 ,283 ಕೋಟಿ ಸಾಲವನ್ನು ಬ್ಯಾಂಕ್ ಗಳು ನೀಡಿವೆ- ಸಿಂಡಿಕೇಟ್ ಬ್ಯಾಂಕ್ ಸಿಇಒ

ಬೆಂಗಳೂರು: ರಾಜ್ಯದ ಆದ್ಯತಾ ರಂಗಗಳ ಬೇಡಿಕೆಗೆ ಅನುಸಾರವಾಗಿ 2015 ಮಾರ್ಚ್ ಅಂತ್ಯದ ವೇಳೆಗೆ 10 ,00 ,283 ಕೋಟಿ ಸಾಲವನ್ನು ಬ್ಯಾಂಕ್ ಗಳು ನೀಡಿವೆ ಎಂದು ಸಿಂಡಿಕೇಟ್ ಬ್ಯಾಂಕ್ ಸಿಇಒ ಹಾಗೂ ರಾಜ್ಯಮಟ್ಟದ ಬ್ಯಾಂಕರ್ ಗಳ ಸಮಿತಿ ಅಧ್ಯಕ್ಷ ಅರುಣ್ ಶ್ರೀವಾಸ್ತವ ಹೇಳಿದ್ದಾರೆ.

ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ರಾಜ್ಯ ಮಟ್ಟದ 131 ನೇ ಬ್ಯಾಂಕರ್ ಗಳ ಸಭೆಯಲ್ಲಿ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದಾರೆ. ಮಾರ್ಚ್ ಅಂತ್ಯಕ್ಕೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ 89 ,821 ಕೋಟಿ ಸಾಲ ನೀಡುವ ಗುರಿ ಹೊಂದಲಾಗಿತ್ತು. ಆದರೆ 1 ,00 ,283 ಕೋಟಿ ಸಾಲವನ್ನು ಆದ್ಯತಾ ರಂಗಕ್ಕೆ ನೀಡಲಾಗಿದ್ದು ಶೇ.111 .65  ರಷ್ಟು ಪ್ರಗತಿ  ಸಾಧಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ 57 , 853 ಕೋಟಿ ಸಾಲ ವಿತರಿಸಿ ಶೇ.101 .6 ರಷ್ಟು ಹೆಚ್ಚಳವಾಗಿದೆ. ಇದರಲ್ಲಿ ಬೆಳೆ ಸಾಲಕ್ಕೆ ರೂ. 39 ,255 ಕೋಟಿ ಸಾಲ ನೀಡುವ ಗುರಿ ಹೊಂದಲಾಗಿತ್ತು. ಆದರೆ 38 , 506 ಕೋಟೊ ಸಾಲ ವಿತರಿಸಿ ಶೇ.98 .10 ರಷ್ಟು ಪ್ರಗತಿ ಸಾಧಿಸಲಾಗಿದೆ. ಕಿರು ಉದ್ದಿಮೆ ಹಾಗೂ ಇತರೆ ಆದ್ಯತಾ ರಂಗದಲ್ಲಿ ಶೇ.130 .26  ರಷ್ಟು ಸಾಧನೆ ಮಾಡಲಾಗಿದೆ ಎಂದರು.

2015 -16  ನೇ ಸಾಲಿನಲ್ಲಿ ಅದ್ಯಾತ ರಂಗಕ್ಕೆ 1 ,12 , 460  ಕೋಟಿ ಸಾಲ ನೀಡುವ ಗುರಿ ಹೊಂದಲಾಗಿದ್ದು, ನಬಾರ್ಡ್ ನಿರೀಕ್ಷಣಾ ಗುರಿ 1 ,08000  ಕೋಟಿಗೂ ಮಿಗಿಲಾಗಿದೆ. ಕೃಷಿ ಕ್ಷೇತ್ರದ ಪಾಲು 62 ,620  ಎಂದು ನಿರೀಕ್ಷಿಸಲಾಗಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT