7 ಆರೋಪಿಗಳ ಬಂಧನ, 27 ಲಕ್ಷದ ಚಿನ್ನಾಭರಣ ವಶ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

7 ಆರೋಪಿಗಳ ಬಂಧನ, 27 ಲಕ್ಷದ ಚಿನ್ನಾಭರಣ ವಶ

ಸರಗಳವು ಮತ್ತು ಮನೆಗಳವು ಮಾಡುತ್ತಿದ್ದ 7 ಆರೋಪಿಗಳನ್ನು ಬಂಧಿಸಿರುವ ಆಗ್ನೇಯ ವಿಭಾಗ ಪೊಲೀಸರು ರು.27 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ...

ಬೆಂಗಳೂರು: ಸರಗಳವು ಮತ್ತು ಮನೆಗಳವು ಮಾಡುತ್ತಿದ್ದ 7 ಆರೋಪಿಗಳನ್ನು ಬಂಧಿಸಿರುವ ಆಗ್ನೇಯ ವಿಭಾಗ ಪೊಲೀಸರು ರು.27 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ನಿರ್ಜನ ಪ್ರದೇಶದಲ್ಲಿ ಒಂಟಿಯಾಗಿ ಓಡಾಡುವ ಮಹಿಳೆಯರ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಹೊಸಕೋಟೆ ತಾಲೂಕಿನ ಡಿ.ಎಂ. ವೆಂಕಟೇಶ್ (27), ಆಂಜಿನಪ್ಪ (19), ಅಂಜನ್‍ಕುಮಾರ್ (24) ಹಾಗೂ ಭರತ್ (25) ಎಂಬುವರನ್ನು ವೈಟ್‍ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬೈಕ್‍ನಲ್ಲಿ ಬಂದು ಕೃತ್ಯ ಎಸಗುತ್ತಿದ್ದರು. ಇವರ ಬಂಧನದಿಂದ ಬೆಂಗಳೂರು ನಗರ, ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದ 6 ಸರಗಳ್ಳತನ, 1 ಸುಲಿಗೆ ಮತ್ತು 1 ಮನೆಗಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ.

ಕೃತ್ಯಕ್ಕೆ ಬಳಸುತ್ತಿದ್ದ 2 ಬೈಕ್ ಸೇರಿ ರು.7 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪಿ. ಹರಿಶೇಖರನ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಾಡುಗೋಡಿಯಲ್ಲೂ ಕಾರ್ಯಾಚರಣೆ: ತಮಿಳುನಾಡಿನ ಆಂಥೋಣಿರಾಜ್ (26), ಆನೇಕಲ್‍ನ ಮೃತ್ಯುಂಜಯ (25) ಹಾಗೂ ಶಿವಕುಮಾರ್(25) ಎಂಬುವರನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ ರು.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ವಸ್ತುಗಳು ಮತ್ತು 2 ಬೈಕ್ ಜಪ್ತಿ ಮಾಡಲಾಗಿದೆ. ಇವರ ಬಂಧನದೊಂದಿಗೆ 6 ಮನೆಗಳವು ಮತ್ತು 2 ಸರಗಳವು ಪ್ರಕರಣಗಳು ಪತ್ತೆಯಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT