ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಬಜೆಟ್ ನಲ್ಲಿ ಉದಾರ ನೀರಾ ನೀತಿಯ ಸಾಧ್ಯತೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ೧೦ ನೆ ಬಜೆಟ್, ತೆಂಗು ಬೆಳೆಗಾರರಲ್ಲಿ ಹರ್ಷ ತರುವ ಸಾಧ್ಯತೆ ಇದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ೧೦ ನೆ ಬಜೆಟ್, ತೆಂಗು ಬೆಳೆಗಾರರಲ್ಲಿ ಹರ್ಷ ತರುವ ಸಾಧ್ಯತೆ ಇದೆ.

ತೆಂಗು ಬೆಳೆದಾರರು ಅಲ್ಕೋಹಾಲ್ ಅಲ್ಲದ ಈ ಪಾನೀಯವನ್ನು ಮಾರುಕಟ್ಟೆಗೆ ಪರಿಚಯಿಸಬಹುದಾದ ಉದಾರ ನೀರಾ ನೀತಿಯನ್ನು ಬಜೆಟ್ ನಲ್ಲಿ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ತೆಂಗಿನ ಮರದಿಂದ ಇಳಿಸುವ ಈ ಪಾನೀಯವನ್ನು ಕೆಲವೇ ಘಂಟೆಗಳಲ್ಲಿ ಕುಡಿಯದೇ ಹೋದರೆ ಅಥವಾ ಸರಿಯಾದ ಉಷ್ಣಾಂಶದಲ್ಲಿ ಶೇಖರಿಸದಿದ್ದರೆ ಮದ್ಯವಾಗಿ ಅದು ಪರಿವರ್ತನೆಯಾಗುತ್ತದೆ.

ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಮೂಲಗಳ ಪ್ರಕಾರ ಸಿದ್ದರಾಮಯ್ಯನವರು ಕೇರಳ ಮತ್ತು ಗೋವಾದಲ್ಲಿ ನೀರಾ ನೀತಿಯನ್ನು ಅಧ್ಯಯನ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ವಾಣಿಜ್ಯ ಉದ್ಯಮಕ್ಕಾಗಿ ನೀರಾ ಇಳಿಸುವುದಕ್ಕೆ, ಸಂಸ್ಕರಿಸುವುದಕ್ಕೆ ಮತ್ತು ಮಾರಾಟ ಮಾಡುವುದಕ್ಕೆ ಈಗಿನ ಕರ್ನಾಟಕ ಅಬಕಾರಿ ನೀತಿಗೆ ತಿದ್ದುಪಡಿ ಮಾಡಬೇಕಿದೆ.

ಹಲವಾರು ವರ್ಷಗಳಿಂದ ತೆಂಗು ಬೆಳೆದಾರಾರು ಈ ತಿದ್ದುಪಡಿಗೆ ಬೇಡಿಕೆ ಇಡುತ್ತಲೇ ಬಂದಿದ್ದಾರೆ. ಸಿದ್ದರಾಮಯ್ಯ ಬಜೆಟ್ ಪೂರ್ವ ರೈತರೊಂದಿಗೆ ಸಂವಾದ ನಡೆಸಿದ ವೇಳೆಯಲ್ಲೂ ಈ ವಿಷಯ ಚರ್ಚೆಗೆ ಬಂದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT