ಅಪಘಾತ 
ಜಿಲ್ಲಾ ಸುದ್ದಿ

ಕಿಲ್ಲರ್ ವಾಹನಗಳಿಗೆ ಬಲಿಯಾಯ್ತು ಇಬ್ಬರ ಜೀವ

ಬೆಂಗಳೂರು: ಬಿಎಂಟಿಸಿ ಬಸ್ ಮತ್ತು ಬಿಬಿಎಂಪಿ ದೈತ್ಯ ಕಸದ ಲಾರಿಗಳು ಯಮಸ್ವರೂಪಿಗಳು ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ನಗರದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಈ ವಾಹನಗಳು ಇಬ್ಬರನ್ನು ಬಲಿ ತೆಗೆದುಕೊಂಡಿವೆ.

ವರ್ತೂರು ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನಕ್ಕೆ ಕಸದ ಲಾರಿ ಡಿಕ್ಕಿ ಹೊಡೆದು ಎಂಬಿಎ ವಿದ್ಯಾರ್ಥಿನಿ ರಮ್ಯಾ (22) ಮೃತಪಟ್ಟಿದ್ದಾರೆ. ಸ್ನೇಹಿತೆ ಪವಿತ್ರಾ ದ್ವಿಚಕ್ರ ವಾಹನದಲ್ಲಿ ರಮ್ಯಾ ಕಾಲೇಜಿಗೆ ತೆರಳುತ್ತಿದ್ದರು. ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ಸ್ಥಳೀಯರು ಸಮೀಪದ ಆಸ್ಪತ್ರೆಗೆ ಹೊತ್ತೊಯ್ದರು. ಅಷ್ಟರಲ್ಲಾಗಲೇ ರಮ್ಯಾ ಮೃತಪಟ್ಟಿದ್ದರು.

ಮಾಣೆಕ್‍ಷಾ ಪರೇಡ್ ಮೈದಾನದ ಬಳಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ತ್ರಿಶೂಲ್ (27) ಮೃತಪಟ್ಟಿದ್ದಾರೆ. ಶಿವಾಜಿನಗರ ಆಸ್ಮಾನ್ ರಸ್ತೆ ನಿವಾಸಿ ತ್ರಿಶೂಲ್, ಆಟೊಮೊಬೈಲ್ ಶೋ ರೂಂನಲ್ಲಿ ಕೆಲಸ ಮಾಡುತ್ತಿದ್ದರು. ಬಿಆರ್ವಿ ಜಂಕ್ಷನ್ ಕಡೆಯಿಂದ ಕಬ್ಬನ್ ರಸ್ತೆ ಕಡೆ ತೆರಳುತ್ತಿದ್ದಾಗ ಹೊಸಕೋಟೆ ಕಡೆಯಿಂದ ಶಿವಾಜಿನಗರಕ್ಕೆ ಬರುತ್ತಿದ್ದ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಸವಾರ ಸ್ಥಳದಲ್ಲೇ ಮೃತಪಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT