ಜಿಲ್ಲಾ ಸುದ್ದಿ

ಜಿಂದಾಲ್ ಚಿಕಿತ್ಸಾ ಕೇಂದ್ರದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಚಿಕಿತ್ಸೆ ಪಡೆಯುತ್ತಿರುವ ಚಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿರುವ...

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಚಿಕಿತ್ಸೆ ಪಡೆಯುತ್ತಿರುವ ಚಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಕೂಲಿ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಮಗಳೂರು ಮೂಲದ ರವಿ(36) ಮೃತರು. ಕೌಟುಂಬಿಕ ಕಲಹ ಕಾರಣಗಳಿಂದ ಚಿಕ್ಕ ಬಿದರಕಲ್ಲಿನಲ್ಲಿ ವಾಸವಿರುವ ಸಂಬಂಧಿ ಶಿವಣ್ಣ ಎಂಬುವರ ಮನೆಗೆ ವಾರದ ಹಿಂದಷ್ಟೇ ರವಿ ಆಗಮಿಸಿದ್ದರು. ಶಿವಣ್ಣ ಅವರು ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದು, ರವಿಗೆ ಜಿಂದಾಲ್‌ನಲ್ಲಿಯೇ ಕೆಲಸಕೊಡಿಸಿದ್ದರು.

ಬುಧವಾರ ಎಂದಿನಂತೆ ಇಬ್ಬರೂ ಕೆಲಸಕ್ಕೆ ತೆರಳಿದ್ದರು. ಸಂಜೆ ಕೆಲಸ ಮುಗಿಸಿಕೊಂಡು ಶಿವಣ್ಣ ಮನೆಗೆ ಹೋಗಿದ್ದು, ರವಿ ಬಂದಿರಲಿಲ್ಲ. ಬೇಸರದಲ್ಲಿದ್ದ ಕಾರಣ ಮನೆಗೆ ಬರಬಹುದು ಎಂದು ಸುಮ್ಮನಾಗಿದ್ದೆ. ಆದರೆ, ಗುರುವಾರ ಬೆಳಗ್ಗೆ ಪೊಲೀಸರು ತಿಳಿಸಿದ ನಂತರವೇ ರವಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ ಎಂದು ಶಿವಣ್ಣ ಪೊಲೀಸರಿಗೆ ತಿಳಿಸಿದ್ದಾರೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT