ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮದವೇರಿದ ಆನೆ ಗಜೇಂದ್ರನ ಆರ್ಭಟಕ್ಕೆ ಆನೆ ಶ್ರೀರಾಮ ಬಲಿ

ದಸರಾ ಆನೆ ಗಜೇಂದ್ರನ ಪುಂಡಾಟಕ್ಕೆ 61 ವರ್ಷದ ಶ್ರೀರಾಮ ಎಂಬ ಆನೆ ಬಲಿಯಾಗಿರುವ ಘಟನೆ ಸೋಮವಾರ ಬೆಳಗ್ಗೆ ಬಿಳಿಗಿರಿರಂಗನ ಬೆಟ್ಟದ ಬಳಿ...

ಕೊಳ್ಳೆಗಾಲ: ದಸರಾ ಆನೆ ಗಜೇಂದ್ರನ ಪುಂಡಾಟಕ್ಕೆ 61 ವರ್ಷದ ಶ್ರೀರಾಮ ಎಂಬ ಆನೆ ಬಲಿಯಾಗಿರುವ ಘಟನೆ ಸೋಮವಾರ ಬೆಳಗ್ಗೆ ಬಿಳಿಗಿರಿರಂಗನ ಬೆಟ್ಟದ ಬಳಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಸಂರಕ್ಷಿತ ಅರಣ್ಯ ಪ್ರದೇಶವಾದ ಕೆ.ಗುಡಿಯಾ ಬಳಿ ಸಾಕಾನೆಗಳ ನಡುವೆ ಕಾದಾಟ ನಡೆದಿದೆ. ಗಜೇಂದ್ರ ಆನೆ ಶ್ರೀರಾಮ ಆನೆಯನ್ನು ದಂತದಿಂದ ತಿವಿದಿತ್ತು.

ಘಟನೆಯಲ್ಲಿ ಎರಡು ಆನೆಗಳೂ ಗಾಯಗೊಂಡಿದ್ದು, ಕಳೆದ ಮೈಸೂರು ದಸರಾದಲ್ಲಿ ಪಾಲ್ಗೊಂಡಿದ್ದ ಶ್ರೀರಾಮ ಆನೆ ಗಂಭೀರವಾಗಿ ಗಾಯಗೊಂಡಿದ್ದ ಪರಿಣಾಮ ಇಂದು ಬೆಳಿಗ್ಗೆ ಮೃತಪಟ್ಟಿದೆ.

ಈ ಪ್ರದೇಶದಲ್ಲಿ ಕೆಲವು ಸಾಕಿದ ಆನೆಗಳನ್ನು ಅರಣ್ಯ ಸಿಬ್ಬಂದಿ ಕರೆತಂದು  ಸೆರೆ ಹಿಡಿದ ಕಾಡಾನೆಗಳನ್ನು ಪಳಗಿಸುವ ಕೆಲಸ ಮಾಡುತ್ತಾರೆ. ನಿನ್ನೆ  ಇದೇ ರೀತಿ ಕೆಲವು ಆನೆಗಳನ್ನು ಇಲ್ಲಿಗೆ ತರಲಾಗಿತ್ತು. 

ತಡರಾತ್ರಿ ಗಜೇಂದ್ರ ಮತ್ತು ಶ್ರೀರಾಮ ಆನೆಗಳ ನಡುವೆ ಕಾದಾಟ ಶುರುವಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಅರಣ್ಯ ಸಿಬ್ಬಂದಿಗಳು ಅದನ್ನು ತಡೆಯಲು ಮುಂದಾದರೂ ಸಹ ಸಾಧ್ಯವಾಗಲಿಲ್ಲ. 

ಸರಪಳಿ ಬಿಚ್ಚಿಕೊಂಡು ಕಾಡಾನೆಗಳ ಜತೆ ಸೇರಿದ ಗಜೇಂದ್ರ, ಕಾಡಿನಲ್ಲಿ ಸೋಲಿಗರ ಹಾಡಿಗಳಿಗೆ ನುಗ್ಗಿದೆ. ಆನೆಯನ್ನು ಹಿಡಿಯಲು ಅರಣ್ಯ ಇಲಾಖೆಯ ಐದು ತಂಡಗಳಿಂದ ಹರಸಾಹಸ ಪಡಲಾಗುತ್ತಿದೆ. ಮನೆ ಬಿಟ್ಟು ಹೊರ ಬರದಂತೆ ಅಲ್ಲಿನ ಗಿರಿಜನರಿಗೆ ಅರಣ್ಯ ಅಧಿಕಾರಿಗಳು ತಿಳಿಸಿದ್ದು, ಅರಣ್ಯ ಪ್ರವೇಶದ ವೇಳೆ ಬೈಕ್ ನಲ್ಲಿ ಬರದಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT