ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮದವೇರಿದ ಆನೆ ಗಜೇಂದ್ರನ ಆರ್ಭಟಕ್ಕೆ ಆನೆ ಶ್ರೀರಾಮ ಬಲಿ

ದಸರಾ ಆನೆ ಗಜೇಂದ್ರನ ಪುಂಡಾಟಕ್ಕೆ 61 ವರ್ಷದ ಶ್ರೀರಾಮ ಎಂಬ ಆನೆ ಬಲಿಯಾಗಿರುವ ಘಟನೆ ಸೋಮವಾರ ಬೆಳಗ್ಗೆ ಬಿಳಿಗಿರಿರಂಗನ ಬೆಟ್ಟದ ಬಳಿ...

ಕೊಳ್ಳೆಗಾಲ: ದಸರಾ ಆನೆ ಗಜೇಂದ್ರನ ಪುಂಡಾಟಕ್ಕೆ 61 ವರ್ಷದ ಶ್ರೀರಾಮ ಎಂಬ ಆನೆ ಬಲಿಯಾಗಿರುವ ಘಟನೆ ಸೋಮವಾರ ಬೆಳಗ್ಗೆ ಬಿಳಿಗಿರಿರಂಗನ ಬೆಟ್ಟದ ಬಳಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಸಂರಕ್ಷಿತ ಅರಣ್ಯ ಪ್ರದೇಶವಾದ ಕೆ.ಗುಡಿಯಾ ಬಳಿ ಸಾಕಾನೆಗಳ ನಡುವೆ ಕಾದಾಟ ನಡೆದಿದೆ. ಗಜೇಂದ್ರ ಆನೆ ಶ್ರೀರಾಮ ಆನೆಯನ್ನು ದಂತದಿಂದ ತಿವಿದಿತ್ತು.

ಘಟನೆಯಲ್ಲಿ ಎರಡು ಆನೆಗಳೂ ಗಾಯಗೊಂಡಿದ್ದು, ಕಳೆದ ಮೈಸೂರು ದಸರಾದಲ್ಲಿ ಪಾಲ್ಗೊಂಡಿದ್ದ ಶ್ರೀರಾಮ ಆನೆ ಗಂಭೀರವಾಗಿ ಗಾಯಗೊಂಡಿದ್ದ ಪರಿಣಾಮ ಇಂದು ಬೆಳಿಗ್ಗೆ ಮೃತಪಟ್ಟಿದೆ.

ಈ ಪ್ರದೇಶದಲ್ಲಿ ಕೆಲವು ಸಾಕಿದ ಆನೆಗಳನ್ನು ಅರಣ್ಯ ಸಿಬ್ಬಂದಿ ಕರೆತಂದು  ಸೆರೆ ಹಿಡಿದ ಕಾಡಾನೆಗಳನ್ನು ಪಳಗಿಸುವ ಕೆಲಸ ಮಾಡುತ್ತಾರೆ. ನಿನ್ನೆ  ಇದೇ ರೀತಿ ಕೆಲವು ಆನೆಗಳನ್ನು ಇಲ್ಲಿಗೆ ತರಲಾಗಿತ್ತು. 

ತಡರಾತ್ರಿ ಗಜೇಂದ್ರ ಮತ್ತು ಶ್ರೀರಾಮ ಆನೆಗಳ ನಡುವೆ ಕಾದಾಟ ಶುರುವಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಅರಣ್ಯ ಸಿಬ್ಬಂದಿಗಳು ಅದನ್ನು ತಡೆಯಲು ಮುಂದಾದರೂ ಸಹ ಸಾಧ್ಯವಾಗಲಿಲ್ಲ. 

ಸರಪಳಿ ಬಿಚ್ಚಿಕೊಂಡು ಕಾಡಾನೆಗಳ ಜತೆ ಸೇರಿದ ಗಜೇಂದ್ರ, ಕಾಡಿನಲ್ಲಿ ಸೋಲಿಗರ ಹಾಡಿಗಳಿಗೆ ನುಗ್ಗಿದೆ. ಆನೆಯನ್ನು ಹಿಡಿಯಲು ಅರಣ್ಯ ಇಲಾಖೆಯ ಐದು ತಂಡಗಳಿಂದ ಹರಸಾಹಸ ಪಡಲಾಗುತ್ತಿದೆ. ಮನೆ ಬಿಟ್ಟು ಹೊರ ಬರದಂತೆ ಅಲ್ಲಿನ ಗಿರಿಜನರಿಗೆ ಅರಣ್ಯ ಅಧಿಕಾರಿಗಳು ತಿಳಿಸಿದ್ದು, ಅರಣ್ಯ ಪ್ರವೇಶದ ವೇಳೆ ಬೈಕ್ ನಲ್ಲಿ ಬರದಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT