ಆತ್ಮಹತ್ಯೆ 
ಜಿಲ್ಲಾ ಸುದ್ದಿ

ಡಿಕೆ ರವಿ ಸಾವಿಗೆ ನೊಂದು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿಯವರ ನಿಗೂಢ ಸಾವಿನಿಂದ ಮನನೊಂದು ಅವರ ಅಭಿಮಾನಿಯೊಬ್ಬ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.

ಕೋಲಾರ: ದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿಯವರ ನಿಗೂಢ ಸಾವಿನಿಂದ ಮನನೊಂದು ಅವರ ಅಭಿಮಾನಿಯೊಬ್ಬ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.

ಕೋಲಾರದ ತಿರುಮಣಹಳ್ಳಿಯ ನಿವಾಸಿ 40 ವರ್ಷದ ಗೋಪಾಲ್ ಆತ್ಮಹತ್ಯೆಗೆ ಶರಣಾದ ಅಭಿಮಾನಿ. ಗೋಪಾಲ್ ಹಲವಾರು ವರ್ಷಗಳಿಂದ ಜಮೀನು ವಿವಾದವನ್ನು ಎದುರಿಸುತ್ತಿದ್ದರು ಎನ್ನಲಾಗಿದೆ. ಡಿ.ಕೆ. ರವಿಯವರು ಕೋಲಾರಕ್ಕೆ ಜಿಲ್ಲಾಧಿಕಾರಿಯಾಗಿ ಬಂದ ಬಳಿಕ ಗೋಪಾಲ್ ಅವರ ಸಮಸ್ಯೆ ಬಗೆಹರಿದಿತ್ತು.

ರವಿಯವರು ಅಕಾಲಿಕ ಮರಣದ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಿದಂತೆ ಗೋಪಾಲ್ ಖಿನ್ನತೆಗೊಳಗಾಗಿದ್ದರು. ಡಿ.ಕೆ ರವಿಯವರ ಫ್ಲೆಕ್ಸ್ ಮಾಡಿಸಿಕೊಂಡು ಊರಲ್ಲಿ ಅದನ್ನು ನೇತು ಹಾಕಿ ಅದಕ್ಕೆ ಹಾರ ಹಾಕಿ ಮನೆಗೆ ಬಂದಿದ್ದರು. ಪತ್ನಿ ಹಾಗೂ ಮಕ್ಕಳು ಮನೆಯಿಂದ ಹೊರ ಹೋದ ಸಂದರ್ಭದಲ್ಲಿ ಅವರು ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT