ಸಂಗ್ರಹ ಚಿತ್ರ 
ಜಿಲ್ಲಾ ಸುದ್ದಿ

ಅಂತೂ ಸೆರೆಸಿಕ್ಕ ಮದ ಗಜೇಂದ್ರ

ಬಿಆರ್ ಟಿಯು ಕೆ.ಗುಡಿಯಲ್ಲಿ ಭಾನುವಾರ ಮಾವುತನನ್ನು ಕೊಂದು, ನಂತರ ಜತೆಗಾರನ ಆನೆ ಶ್ರೀರಾಮನನ್ನೂ ಹತ್ಯೆಗೈದು ಪರಾರಿಯಾಗಿದ್ದ ಮೈಸೂರು ದಸರೆಯ...

ಚಾಮರಾಜನಗರ: ಬಿಆರ್ ಟಿಯು ಕೆ.ಗುಡಿಯಲ್ಲಿ ಭಾನುವಾರ ಮಾವುತನನ್ನು ಕೊಂದು, ನಂತರ ಜತೆಗಾರನ ಆನೆ ಶ್ರೀರಾಮನನ್ನೂ ಹತ್ಯೆಗೈದು ಪರಾರಿಯಾಗಿದ್ದ ಮೈಸೂರು ದಸರೆಯ ಪಟ್ಟದಾನೆ ಗಜೇಂದ್ರ ಮಂಗಳವಾರ ಕಾರ್ಯಾಚರಣೆ ವೇಳೆ ಸೆರೆ ಸಿಕ್ಕಿದ್ದಾನೆ.

ಸೋಮವಾರ ಬೆಳಗಿನಿಂದಲೇ 5 ತಂಡಗಳು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದವು. ಆದರೆ ಗಂಜೇಂದ್ರನ ಸುಳಿವು ಸಿಕ್ಕಿರಲಿಲ್ಲ. ಮಂಗಳವಾರ ಬಿಳಿಗಿರಿರಂಗನ ಬೆಟ್ಟದ ಮುತ್ತುಗದ ಗದ್ದೆ ಪೋಡಿನ ಹೆಬ್ಬಾವು ಅರೆ ಬಳಿ ಸುಮಾರು 11 ಗಂಟೆಗೆ ಗಜೇಂದ್ರ ತಂಡಕ್ಕೆ ಕಾಣಿಸಿಕೊಂಡಿದ್ದಾನೆ.

ನಂತರ ಆತನಿಗೆ ಅರವಳಿಕೆ ಚುಚ್ಚುಮದ್ದು ನೀಡಿ ಮಾವುತನ ಸಹಾಯದಿಂದ ಕಾಡಿನಿಂದ ಹೊರತರಲಾಯಿತು.

ಅಲ್ಲಿಂದ ಲಾರಿ ಮೂಲಕ ಕೆ.ಗುಡಿ ಆನೆ ಶಿಬಿರಕ್ಕೆ ಸಾಗಿಸಲಾಗಿದೆ. ಮಾವುತನ ಸನ್ನೆಗೆ ಸ್ಪಂದಿಸುತ್ತಿದ್ದು, ಆತನ ವರ್ತನೆ ಮೇಲೆ ತೀವ್ರ ನಿಗಾ ಇಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT