ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ತುಮಕೂರು ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಖಡಕ್ ಅಧಿಕಾರಿ ಡಿ.ಕೆ. ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಕರೆ ಮೇರೆಗೆ ಗುರುವಾರ ನಡೆದ ತುಮಕೂರು ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು...

ತುಮಕೂರು: ಖಡಕ್ ಅಧಿಕಾರಿ ಡಿ.ಕೆ. ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಕರೆ ಮೇರೆಗೆ ಗುರುವಾರ ನಡೆದ ತುಮಕೂರು ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಬೆಳಗ್ಗೆ ವಿವಿಧ ಸಂಘಟನೆಗಳ ಮುಖಂಡರು ತುಮಕೂರಿನ ಟೌನ್‍ಹಾಲ್ ವೃತ್ತಕ್ಕೆ ಬೈಕ್‍ಗಳಲ್ಲಿ ಆಗಮಿಸಿ ಸಮಾವೇಶ ಗೊಂಡರು. ಅಲ್ಲಿಂದ ತೆರಳಿ ಸಿನಿಮಾ ಮಂದಿರ, ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದರು. ನಗರದಲ್ಲಿ ಬೈಕ್ ರ್ಯಾಲಿ ನಡೆಸಿದರು. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿದರು.

ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿ ಗಳ ಜೀವಕ್ಕೆ ಸಂಚಕಾರ ಇದೆ. ಸತ್ಯಾಸತ್ಯತೆ ತಿಳಿಸಬೇಕಾದ ಸರ್ಕಾರ ಬರೀ ಸಬೂಬು ಹೇಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತುಮಕೂರು ವಿಶ್ವವಿದ್ಯಾಲಯ ಮುಂಭಾಗ ಎಬಿವಿಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಲು ಮುಂದಾದಾಗ ಪೊಲೀಸರು ಚದುರಿಸಿದರು. ಟೈರ್‍ಗಳನ್ನು ಸುಡಲು ಯತ್ನಿಸಿದ ಗುಂಪನ್ನೂ ಚದುರಿಸಲಾಯಿತು. ಮುಖ್ಯ ರಸ್ತೆ ಹೊರತುಪಡಿಸಿದರೆ ಬೇರೆ ಬಡವಾಣೆಗಳಲ್ಲಿ ಅಂಗಡಿ, ಮುಗ್ಗಟ್ಟುಗಳು ತೆರೆದಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT