ಸಿದ್ದರಾಮಯ್ಯ 
ಜಿಲ್ಲಾ ಸುದ್ದಿ

ಡಿಕೆ ರವಿ ನಿಗೂಢ ಸಾವು ಪ್ರಕರಣ: ಯಾರನ್ನೂ ರಕ್ಷಿಸುವುದಿಲ್ಲ ಎಂದ ಸಿದ್ದರಾಮಯ್ಯ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿ ಅವರ ಸಾವಿಗೆ ಸಂಬಂಧಿಸಿದಂತೆ ಯಾವುದೇ ಸಂಗತಿಗಳನ್ನು ಮುಚ್ಚಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿ ಅವರ ಸಾವಿಗೆ ಸಂಬಂಧಿಸಿದಂತೆ ಯಾವುದೇ ಸಂಗತಿಗಳನ್ನು ಮುಚ್ಚಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದು, ಈ ಸಾವಿನ ಹಿಂದೆ ಯಾರದಾದರೂ ಕೈವಾಡವಿದ್ದರೆ ಅವರನ್ನೂ ರಕ್ಷಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಸದನದಲ್ಲಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸರಕಾರದ ನಿಲುವೇನೆಂಬುದನ್ನು ಸ್ಪಷ್ಟಪಡಿಸುವುದಾಗಿ ಅವರು ಮಾಧ್ಯಮಕ್ಕೆ ತಿಳಿಸಿದರು. ರವಿ ಸಾವಿನ ಪ್ರಕರಣವನ್ನು ಸಿಐಡಿ ಬದಲು ಸಿಬಿಐಗೆ ವಹಿಸಬೇಕೆಂದು ವಿರೋಧ ಪಕ್ಷ ಮತ್ತು ಸಾರ್ವಜನಿಕರಿಂದ ಒತ್ತಡ ಬರುತ್ತಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಲೇಬೇಕಾಗಿದೆ.

ಕಡೆಗೂ ಬಾಯಿಬಿಟ್ಟ ಸಿದ್ದು ಕೋಲಾರದ ಡಿಸಿಯಾಗಿದ್ದಾಗ ಡಿಕೆ ರವಿ ಭೂಗಳ್ಳರಿಗೆ ಸಿಂಹಸ್ವಪ್ನವಾಗಿದ್ದರು. ಕೆಲ ರಾಜಕಾರಣಿಗಳಿಂದ ಡಿಕೆ ರವಿಯವರಿಗೆ ಬೆದರಿಕೆಯ ಕರೆಗಳೂ ಬಂದಿದ್ದವು. ಈ ಹಿನ್ನೆಲೆಯಲ್ಲಿ ಕೋಲಾರದಿಂದ ಬೆಂಗಳೂರಿಗೆ ಅವರನ್ನು ಟ್ರಾನ್ಸ್‌ಫರ್ ಮಾಡಲಾಗಿತ್ತು. ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಕೂಡ ತೆರಿಗೆಗಳ್ಳರ ವಿರುದ್ಧ ರವಿ ತಿರುಗಿಬಿದ್ದಿದ್ದರು. ಅವರಿಂದ ಕೊಲೆ ಬೆದರಿಕೆ ಕರೆ ಬಂದಿದ್ದರಿಂದ ರವಿಯವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT