ಡಿ.ಕೆ.ರವಿ 
ಜಿಲ್ಲಾ ಸುದ್ದಿ

ಸ್ಮಾರಕವಾಗಲಿದೆ ಡಿ.ಕೆ. ರವಿ ಸಮಾಧಿ!

ತುಮಕೂರು: ರವಿ ಸಮಾಧಿ ಇನ್ನು ಸ್ಮಾರಕವಾಗಲಿದೆ. ರವಿ ಅವರ ಜನಪರ ಕಾಳಜಿ ಮತ್ತು ಆದರ್ಶ ಕೆಲಸಗಳು ಮುಂದಿನ ತಲೆ ಮಾರಿಗೆ ಸ್ಫೂರ್ತಿಯಾಗಬೇಕೆಂಬ ಆಶಯದೊಂದಿಗೆ ಸ್ಮಾರಕ ನಿರ್ಮಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ.

ತುಮಕೂರು, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ ಮುಂತಾದ ಕಡೆಗಳಿಂದ ಸೋಮವಾರ ಆಗಮಿಸಿದ್ದ ರವಿ ಅಭಿಮಾನಿಗಳು ಸಮಾಧಿಗೆ ನಮಸ್ಕರಿಸಿದ ಬಳಿಕ ಸಭೆ ನಡೆಸಿ ಈ ತೀರ್ಮಾನಕ್ಕೆ ಬಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರವಿ ಅಭಿಮಾನಿಗಳು ಶೀಘ್ರ ಭೇಟಿ ಮಾಡಿ ಸ್ಮಾರಕ ನಿರ್ಮಿಸಲು ಮನವಿ ಪತ್ರ ಸಲ್ಲಿಸಲಿದ್ದಾರೆ. ಒಂದು ಸರ್ಕಾರ ಸ್ಪಂದಿಸದಿದ್ದರೆ ತಾವೇ ಸ್ಮಾರಕ ನಿರ್ಮಿಸಲಿದ್ದಾರೆ. ಅಲ್ಲದೆ ರವಿ ಸ್ಮಾರಕ ನಿರ್ಮಾಣ ಸಂಬಂಧ ಶೀಘ್ರ ಸಭೆ ಕರೆಯಲಿದ್ದಾರೆ. ಹೋರಾಟಗಾರರ ಅಭಿಪ್ರಾಯ ಪಡೆದು, ಸ್ಮಾರಕದ ರೂಪರೇಷೆ ಬಗ್ಗೆ ಚರ್ಚಿಸಲಿದ್ದಾರೆ.

ಈ ಸಂಬಂಧ ರವಿ ಕುಟುಂಬದ ಜತೆ ಚರ್ಚಿಸಿ ಒಪ್ಪಿಗೆ ಪಡೆಯಲಿದ್ದೇವೆ ಎಂದು ಡಿ.ಕೆ.ರವಿ ಅಭಿಮಾನಿ ಕೋಲಾರದ ವೆಂಕಟೇಶ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT