ಡಿ.ಕೆ.ರವಿ 
ಜಿಲ್ಲಾ ಸುದ್ದಿ

ಮತ್ತೆ ಶವ ಪರೀಕ್ಷೆ?

ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣ ಸಿಬಿಐ ತನಿಖೆಗೆ ವಹಿಸಿರುವುದರಿಂದ ಅವರ ಮೃತದೇಹ ಹೊರತೆಗೆದು ಮತ್ತೊಮ್ಮೆ ಶವ ಪರೀಕ್ಷೆ ಮಾಡುವ ಸಾಧ್ಯತೆ ಇದೆ. ಇಂಥ ನಿಗೂಢ ಹಾಗೂ ಗೊಂದಲದ ಪ್ರಕರಣಗಳಲ್ಲಿ ಪ್ರಥಮವಾಗಿ ಮೃತದೇಹವನ್ನು ಮತ್ತೆ ಹೊರತೆಗೆಸಿ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ಮಾಡಿಸಲಾಗುತ್ತದೆ...

ಬೆಂಗಳೂರು: ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣ ಸಿಬಿಐ ತನಿಖೆಗೆ ವಹಿಸಿರುವುದರಿಂದ ಅವರ ಮೃತದೇಹ ಹೊರತೆಗೆದು ಮತ್ತೊಮ್ಮೆ ಶವ ಪರೀಕ್ಷೆ ಮಾಡುವ ಸಾಧ್ಯತೆ ಇದೆ. ಇಂಥ ನಿಗೂಢ ಹಾಗೂ ಗೊಂದಲದ ಪ್ರಕರಣಗಳಲ್ಲಿ ಪ್ರಥಮವಾಗಿ ಮೃತದೇಹವನ್ನು ಮತ್ತೆ ಹೊರತೆಗೆಸಿ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ಮಾಡಿಸಲಾಗುತ್ತದೆ.

ಅಗತ್ಯಬಿದ್ದರೆ ಎರಡು ಅಥವಾ ಮೂರು ಕಡೆ ಮರಣೋತ್ತರ ತಜ್ಞರಿಂದ ಪರೀಕ್ಷೆ ನಡೆಸಲಾಗುತ್ತದೆ. ಈ ಹಿಂದೆ ಇದೇ ರೀತಿ ಮರು ಮರಣೋತ್ತರ ಪರೀಕ್ಷೆ ನಡೆಸಿರುವ ಪ್ರಕರಣಗಳ ಉದಾಹರಣೆಗಳೂ ಸಾಕಷ್ಟಿವೆ ಎನ್ನುತ್ತಾರೆ ಸಿಬಿಐ ಹಿರಿಯ ಅಧಿಕಾರಿಗಳು.

ಆದ್ದರಿಂದ ಈ ಪ್ರಕರಣದಲ್ಲೂ ಪೊಲೀಸರು ರವಿ ಅವರ ಮೃತದೇಹ ಹೊರ ತೆಗೆಸಿ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ನಡೆಸಿದರೂ ಆಶ್ಚರ್ಯವಿಲ್ಲ. ಜತೆಗೆ ಲ್ಯಾಪ್‍ಟಾಪ್, ಐ-ಪ್ಯಾಡ್, 3 ಮೊಬೈಲ್, ಹಾರ್ಡ್ ಡಿಸ್ಕ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಹೈದ್ರಾಬಾದ್ ವಲಯದ ಸಿಬಿಐ ಅಧಿಕಾರಿಗಳು ನಗರದ ಸಿಐಡಿ ಅಧಿಕಾರಿಗಳಿಂದ ಪಡೆಯುತ್ತಾರೆ. ಅವರ ಸಾವಿಗೆ ಮುನ್ನ 24 ಗಂಟೆಯೊಳಗೆ ಮಾತನಾಡಿದ ಎಲ್ಲರಿಂದ ಹಾಗೂ ಕುಟುಂಬ ಸದಸ್ಯರಿಂದ ಮಾಹಿತಿ ಕಲೆಹಾಕುತ್ತಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT