ಡಿ.ಕೆ.ರವಿ 
ಜಿಲ್ಲಾ ಸುದ್ದಿ

ಮತ್ತೆ ಶವ ಪರೀಕ್ಷೆ?

ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣ ಸಿಬಿಐ ತನಿಖೆಗೆ ವಹಿಸಿರುವುದರಿಂದ ಅವರ ಮೃತದೇಹ ಹೊರತೆಗೆದು ಮತ್ತೊಮ್ಮೆ ಶವ ಪರೀಕ್ಷೆ ಮಾಡುವ ಸಾಧ್ಯತೆ ಇದೆ. ಇಂಥ ನಿಗೂಢ ಹಾಗೂ ಗೊಂದಲದ ಪ್ರಕರಣಗಳಲ್ಲಿ ಪ್ರಥಮವಾಗಿ ಮೃತದೇಹವನ್ನು ಮತ್ತೆ ಹೊರತೆಗೆಸಿ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ಮಾಡಿಸಲಾಗುತ್ತದೆ...

ಬೆಂಗಳೂರು: ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣ ಸಿಬಿಐ ತನಿಖೆಗೆ ವಹಿಸಿರುವುದರಿಂದ ಅವರ ಮೃತದೇಹ ಹೊರತೆಗೆದು ಮತ್ತೊಮ್ಮೆ ಶವ ಪರೀಕ್ಷೆ ಮಾಡುವ ಸಾಧ್ಯತೆ ಇದೆ. ಇಂಥ ನಿಗೂಢ ಹಾಗೂ ಗೊಂದಲದ ಪ್ರಕರಣಗಳಲ್ಲಿ ಪ್ರಥಮವಾಗಿ ಮೃತದೇಹವನ್ನು ಮತ್ತೆ ಹೊರತೆಗೆಸಿ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ಮಾಡಿಸಲಾಗುತ್ತದೆ.

ಅಗತ್ಯಬಿದ್ದರೆ ಎರಡು ಅಥವಾ ಮೂರು ಕಡೆ ಮರಣೋತ್ತರ ತಜ್ಞರಿಂದ ಪರೀಕ್ಷೆ ನಡೆಸಲಾಗುತ್ತದೆ. ಈ ಹಿಂದೆ ಇದೇ ರೀತಿ ಮರು ಮರಣೋತ್ತರ ಪರೀಕ್ಷೆ ನಡೆಸಿರುವ ಪ್ರಕರಣಗಳ ಉದಾಹರಣೆಗಳೂ ಸಾಕಷ್ಟಿವೆ ಎನ್ನುತ್ತಾರೆ ಸಿಬಿಐ ಹಿರಿಯ ಅಧಿಕಾರಿಗಳು.

ಆದ್ದರಿಂದ ಈ ಪ್ರಕರಣದಲ್ಲೂ ಪೊಲೀಸರು ರವಿ ಅವರ ಮೃತದೇಹ ಹೊರ ತೆಗೆಸಿ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ನಡೆಸಿದರೂ ಆಶ್ಚರ್ಯವಿಲ್ಲ. ಜತೆಗೆ ಲ್ಯಾಪ್‍ಟಾಪ್, ಐ-ಪ್ಯಾಡ್, 3 ಮೊಬೈಲ್, ಹಾರ್ಡ್ ಡಿಸ್ಕ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಹೈದ್ರಾಬಾದ್ ವಲಯದ ಸಿಬಿಐ ಅಧಿಕಾರಿಗಳು ನಗರದ ಸಿಐಡಿ ಅಧಿಕಾರಿಗಳಿಂದ ಪಡೆಯುತ್ತಾರೆ. ಅವರ ಸಾವಿಗೆ ಮುನ್ನ 24 ಗಂಟೆಯೊಳಗೆ ಮಾತನಾಡಿದ ಎಲ್ಲರಿಂದ ಹಾಗೂ ಕುಟುಂಬ ಸದಸ್ಯರಿಂದ ಮಾಹಿತಿ ಕಲೆಹಾಕುತ್ತಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT