ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ರು.60 ಕೋಟಿ ಮೌಲ್ಯದ ಭೂ ಒತ್ತುವರಿ ತೆರವು

ಪಟ್ಟಾಭಿರಾಮನಗರದಲ್ಲಿ ಜಟ್ಟಿ ಸಂಘ ಒತ್ತುವರಿ ಮಾಡಿದ್ದ ರು.60 ಕೋಟಿ ಮೌಲ್ಯದ 35 ಸಾವಿರ ಚ.ಅಡಿ ಭೂಮಿಯನ್ನು ಬಿಬಿಎಂಪಿ ವಶಪಡಿಸಿಕೊಂಡಿದೆ...

ಬೆಂಗಳೂರು: ಪಟ್ಟಾಭಿರಾಮನಗರದಲ್ಲಿ ಜಟ್ಟಿ ಸಂಘ ಒತ್ತುವರಿ ಮಾಡಿದ್ದ ರು.60 ಕೋಟಿ ಮೌಲ್ಯದ 35 ಸಾವಿರ ಚ.ಅಡಿ ಭೂಮಿಯನ್ನು ಬಿಬಿಎಂಪಿ ವಶಪಡಿಸಿಕೊಂಡಿದೆ.

ಆಟದ ಮೈದಾನದಲ್ಲಿ ಅನಧಿಕೃತವಾಗಿ ಕಾಂಪೌಂಡ್ ಗೋಡೆ ನಿರ್ಮಿಸಿದ್ದ ಜಟ್ಟಿ ಸಂಘ, ಈ ಜಾಗದಲ್ಲಿ ವಾಚ್‍ಮೆನ್ ಶೆಡ್ ನಿರ್ಮಿಸಿಕೊಂಡಿದ್ದರು. ನ್ಯಾಯಾಲಯದ ಆದೇಶದಂತೆ ದಕ್ಷಿಣ ವಲಯದ ಜಂಟಿ ಆಯುಕ್ತ ಎ.ಬಿ.ಹೇಮಚಂದ್ರ ಅವರ ನೇತೃತ್ವದಲ್ಲಿ ಒತ್ತುವರಿ ತೆರವುಗೊಳಿಸಲಾಯಿತು. 1992ರಿಂದ ಈ ಜಾಗವನ್ನು ಆಟದ ಮೈದಾನವೆಂದು ಘೋಷಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗಿತ್ತು. `ಜಟ್ಟಿ ಕಮ್ಯುನಿಟಿ ಟ್ರಸ್ಟ್ ' ಈ ಜಾಗದಲ್ಲಿ ಅನಧಿಕೃತವಾಗಿ ಶೆಡ್ ನಿರ್ಮಿಸಿ ಒತ್ತುವರಿ ಮಾಡಿಕೊಂಡಿತ್ತು.

ಈ ವಿವಾದ ನ್ಯಾಯಾಲಯದ ಮೇಟ್ಟಿಲೇರಿದ್ದು, ಬಿಬಿಎಂಪಿಗೆ ಸೇರಿದ ಜಾಗ ಎಂದು ತೀರ್ಪು ನೀಡಲಾಗಿತ್ತು. ಹಲವು ಬಾರಿ ನೋಟಿಸ್ ನೀಡಿದ್ದರೂ ತೆರವು ಮಾಡಲು ಸಂಘ ಮುಂದಾಗಿರಲಿಲ್ಲ. ಬೆಳಗ್ಗೆ 6 ಗಂಟೆಯಿಂದ ಆರಂಭವಾದ ಕಾರ್ಯಾಚರಣೆ ಮಧ್ಯಾಹ್ನದ ವೇಳೆಗೆ ಪೂರ್ಣಗೊಂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT