ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ರು.60 ಕೋಟಿ ಮೌಲ್ಯದ ಭೂ ಒತ್ತುವರಿ ತೆರವು

ಪಟ್ಟಾಭಿರಾಮನಗರದಲ್ಲಿ ಜಟ್ಟಿ ಸಂಘ ಒತ್ತುವರಿ ಮಾಡಿದ್ದ ರು.60 ಕೋಟಿ ಮೌಲ್ಯದ 35 ಸಾವಿರ ಚ.ಅಡಿ ಭೂಮಿಯನ್ನು ಬಿಬಿಎಂಪಿ ವಶಪಡಿಸಿಕೊಂಡಿದೆ...

ಬೆಂಗಳೂರು: ಪಟ್ಟಾಭಿರಾಮನಗರದಲ್ಲಿ ಜಟ್ಟಿ ಸಂಘ ಒತ್ತುವರಿ ಮಾಡಿದ್ದ ರು.60 ಕೋಟಿ ಮೌಲ್ಯದ 35 ಸಾವಿರ ಚ.ಅಡಿ ಭೂಮಿಯನ್ನು ಬಿಬಿಎಂಪಿ ವಶಪಡಿಸಿಕೊಂಡಿದೆ.

ಆಟದ ಮೈದಾನದಲ್ಲಿ ಅನಧಿಕೃತವಾಗಿ ಕಾಂಪೌಂಡ್ ಗೋಡೆ ನಿರ್ಮಿಸಿದ್ದ ಜಟ್ಟಿ ಸಂಘ, ಈ ಜಾಗದಲ್ಲಿ ವಾಚ್‍ಮೆನ್ ಶೆಡ್ ನಿರ್ಮಿಸಿಕೊಂಡಿದ್ದರು. ನ್ಯಾಯಾಲಯದ ಆದೇಶದಂತೆ ದಕ್ಷಿಣ ವಲಯದ ಜಂಟಿ ಆಯುಕ್ತ ಎ.ಬಿ.ಹೇಮಚಂದ್ರ ಅವರ ನೇತೃತ್ವದಲ್ಲಿ ಒತ್ತುವರಿ ತೆರವುಗೊಳಿಸಲಾಯಿತು. 1992ರಿಂದ ಈ ಜಾಗವನ್ನು ಆಟದ ಮೈದಾನವೆಂದು ಘೋಷಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗಿತ್ತು. `ಜಟ್ಟಿ ಕಮ್ಯುನಿಟಿ ಟ್ರಸ್ಟ್ ' ಈ ಜಾಗದಲ್ಲಿ ಅನಧಿಕೃತವಾಗಿ ಶೆಡ್ ನಿರ್ಮಿಸಿ ಒತ್ತುವರಿ ಮಾಡಿಕೊಂಡಿತ್ತು.

ಈ ವಿವಾದ ನ್ಯಾಯಾಲಯದ ಮೇಟ್ಟಿಲೇರಿದ್ದು, ಬಿಬಿಎಂಪಿಗೆ ಸೇರಿದ ಜಾಗ ಎಂದು ತೀರ್ಪು ನೀಡಲಾಗಿತ್ತು. ಹಲವು ಬಾರಿ ನೋಟಿಸ್ ನೀಡಿದ್ದರೂ ತೆರವು ಮಾಡಲು ಸಂಘ ಮುಂದಾಗಿರಲಿಲ್ಲ. ಬೆಳಗ್ಗೆ 6 ಗಂಟೆಯಿಂದ ಆರಂಭವಾದ ಕಾರ್ಯಾಚರಣೆ ಮಧ್ಯಾಹ್ನದ ವೇಳೆಗೆ ಪೂರ್ಣಗೊಂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT