ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮಹಿಳೆಯಿಂದ ರು.4.5 ಲಕ್ಷ ಎಗರಿಸಿ ಬೈಕ್‍ನಲ್ಲಿ ಪರಾರಿ

ಬ್ಯಾಂಕ್‍ನಿಂದ ಡ್ರಾ ಮಾಡಿ ರು.4.5 ಲಕ್ಷ ಹಣ ತೆಗೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಹಣವಿದ್ದ ಬ್ಯಾಗ್ ಕಸಿದು ಬೈಕ್‍ನಲ್ಲಿ ಪರಾರಿಯಾಗಿರುವ ಘಟನೆ ತಿಲಕನಗರದಲ್ಲಿ ಗುರುವಾರ ನಡೆದಿದೆ...

ಬೆಂಗಳೂರು: ಬ್ಯಾಂಕ್‍ನಿಂದ ಡ್ರಾ ಮಾಡಿ ರು.4.5 ಲಕ್ಷ ಹಣ ತೆಗೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಹಣವಿದ್ದ ಬ್ಯಾಗ್ ಕಸಿದು ಬೈಕ್‍ನಲ್ಲಿ ಪರಾರಿಯಾಗಿರುವ ಘಟನೆ ತಿಲಕನಗರದಲ್ಲಿ ಗುರುವಾರ ನಡೆದಿದೆ.

ತಿಲಕ್‍ನಗರ ನಿವಾಸಿ ಅಣ್ಣಮ್ಮ (45) ಗುರುವಾರ ಮಧ್ಯಾಹ್ನ 12 ಗಂಟೆಗೆ ಜಯನಗರ 9ನೇ ಬ್ಲಾಕ್‍ನಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆಗೆ ತೆರಳಿ ಹಣ ಡ್ರಾ ಮಾಡಿ, ಬ್ಯಾಗ್‍ನಲ್ಲಿಟ್ಟುಕೊಂಡು ಹೊರ ಬಂದಿದ್ದಾರೆ. ಮನೆಗೆ ಹೋಗಲು ಸಮೀಪದ ಬಸ್ ನಿಲ್ದಾಣಕ್ಕೆ ಪಾದಚಾರಿ ಮಾರ್ಗದಲ್ಲಿ ನಡೆದು ಹೋಗುತ್ತಿದ್ದಾಗ ಹಿಂದಿನಿಂದ ಕಪ್ಪು ಬಣ್ಣದ ಪಲ್ಸರ್ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಬ್ಯಾಗ್ ಕಿತ್ತು ಪರಾರಿಯಾಗಿದ್ದಾರೆ. ಅಣ್ಣಮ್ಮ ನೆರವಿಗಾಗಿ ಚೀರಿಕೊಂಡರಾದರೂ ಸ್ಥಳೀಯರು ಬರುವಷ್ಟರಲ್ಲಿ ಆರೋಪಿಗಳು ಕಣ್ಮರೆಯಾಗಿದ್ದಾರೆ. ಈ ಸಂಬಂಧ ತಿಲಕ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

1.5 ಕೆಜಿ ಚಿನ್ನಾಭರಣ, ನಗದು ವಶ: ಸೂಕ್ತ ದಾಖಲೆಗಳಿಲ್ಲದೇ ಕೇರಳಕ್ಕೆ ಸಾಗಿಸಲಾಗುತ್ತಿದ್ದ 1.5 ಕೆಜಿ ಚಿನ್ನಾಭರಣ ಹಾಗೂ ರು. 4.7 ಲಕ್ಷ ನಗದನ್ನು ವಶಪಡಿಸಿಕೊಂಡಿರುವ ಚಿಕ್ಕಪೇಟೆ ಪೊಲೀಸರು, ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಕೇರಳ ತ್ರಿಶೂರ್‍ನ ವಿಜಯನ್(50) ಬಂಧಿತ. ಬುಧವಾರ ರಾತ್ರಿ ಮೈಸೂರು ಬ್ಯಾಂಕ್ ವೃತ್ತ ಸಮೀಪ ಆರೋಪಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಈ ವೇಳೆ ಗಸ್ತಿನಲ್ಲಿದ್ದ ಸಿಬ್ಬಂದಿ ತಡೆದು ಪರಿಶೀಲಿಸಿದಾಗ ಆತನ ಬಳಿ ಚಿನ್ನ ಹಾಗೂ ನಗದು ಪತ್ತೆಯಾಯಿತು.

ಠಾಣೆಗೆ ಕರೆತಂದು ವಿಚಾರಿಸಿದಾಗ ಕೇರಳದ ತ್ರಿಶೂರ್‍ನಲ್ಲಿ ಚಿನ್ನದ ವ್ಯಾಪಾರಿ ಪಾಲ್‍ಸನ್ ಎಂಬುವರ ಬಳಿ ಕೆಲಸ ಮಾಡುತ್ತಿದ್ದು, ಬೆಂಗಳೂರಿನಲ್ಲಿ ಚಿನ್ನಾಭರಣ ಖರೀದಿಸಿ ವಾಪಸ್ ಕೇರಳಕ್ಕೆ ಹೋಗುತ್ತಿದ್ದೆ ಎಂದಿದ್ದಾನೆ. ಆದರೆ, ಈ ಬಗ್ಗೆ ಯಾವುದೇ ದಾಖಲೆ ಪತ್ರ ಇರಲಿಲ್ಲ. ಹೀಗಾಗಿ, ಚಿನ್ನ, ನಗದು ಜಪ್ತಿ ಮಾಡಿ ಬಂಧಿಸಲಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಪೇಟೆ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ