ಕರ್ನಾಟಕ ಹೈಕೋರ್ಟ್ 
ಜಿಲ್ಲಾ ಸುದ್ದಿ

ಮೇ30 ರೊಳಗೆ ಬಿಬಿಎಂಪಿ ಚುನಾವಣೆ ನಡೆಸಿ: ಹೈಕೋರ್ಟ್

ಬಿಬಿಎಂಪಿ ವಿಭಜನೆ, ವಾರ್ಡ್ ಗಳ ಪುನರ್ ವಿಂಗಡಣೆಯ ನೆಪ ಹೇಳಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಮುಂದೂಡಬಾರದು ಮತ್ತು ಮೇ 30ರೊಳಗೆ ಚುನಾವಣೆ ನಡೆಸುವಂತೆ...

ಬೆಂಗಳೂರು: ಬಿಬಿಎಂಪಿ ವಿಭಜನೆ, ವಾರ್ಡ್ ಗಳ ಪುನರ್ ವಿಂಗಡಣೆಯ ನೆಪ ಹೇಳಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಮುಂದೂಡಬಾರದು ಮತ್ತು ಮೇ 30ರೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ವಿಭಜನೆಯವರೆಗೆ ಬಿಬಿಎಂಪಿಯನ್ನು ಖಾಲಿ ಇಡಲು ಸಾಧ್ಯವಿಲ್ಲ. ಮೇ 30ರೊಳಗೆ ಚುನಾವಣೆ ನಡೆಸಿ ಎಂದಿದೆ. ಅಲ್ಲದೆ ಏಪ್ರಿಲ್ 13ರೊಳಗೆ ಮೀಸಲಾತಿ ಪಟ್ಟಿ ನೀಡುವಂತೆ ಸೂಚನೆ ನೀಡಿದೆ. ಇಲ್ಲದಿದ್ದರೆ ಹಾಲಿ ಮೀಸಲಾತಿ ಪಟ್ಟಿಯಂತೆಯೇ ಚುನಾವಣೆ ನಡೆಸಲು ಆದೇಶ ನೀಡಲಾಗುವುದು ಎಂದು ಸರ್ಕಾರಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಎಚ್ಚರಿಕೆ ನೀಡಿದ್ದಾರೆ.

ಇದೇ ಮಾರ್ಚ್ 19ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಆಡಳಿತ ಸುಧಾರಣೆ ದೃಷ್ಟಿಯಿಂದ ಬಿಬಿಎಂಪಿಯನ್ನು 3 ಭಾಗಗಳಾಗಿ ವಿಭಜನೆ ಮಾಡಲು ನಿರ್ಧರಿಸಲಾಗಿತ್ತು. ಅಲ್ಲದೇ ವಾರ್ಡ್ ಪುನರ್ ವಿಂಗಡಣೆ ಕಾರ್ಯದ ಹೊಣೆಗಾರಿಕೆಯನ್ನು ಈಗಾಗಲೇ ರಚನೆಯಾಗಿರುವ ಬಿ.ಎಸ್.ಪಾಟೀಲ್ ನೇತೃತ್ವದ ಸಮಿತಿಗೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು. ರಾಜ್ಯ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಕಾರ್ಪೋರೇಟರ್ ಗಳಾದ ಬಿ.ಸೋಮಶೇಖರ್, ರಾಮಮೂರ್ತಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ,  ಬಿಬಿಎಂಪಿ ವಿಭಜನೆ ತಕ್ಷಣಕ್ಕೆ ಸಾಧ್ಯವಿಲ್ಲ. ರಾಜ್ಯ ಸರ್ಕಾರದಿಂದ ಏಕಪಕ್ಷೀಯ ಕ್ರಮ ಸರಿಯಲ್ಲ ಎಂದು ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT