ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಆನೆ ದಂತ ವಿಗ್ರಹ ಮಾರಾಟ: ಇಬ್ಬರ ಸೆರೆ

ಆನೆ ದಂತದಿಂದ ತಯಾರಿಸಿದ ಬುದ್ಧನ ವಿಗ್ರಹಗಳ ಮಾರಾಟಕ್ಕೆ ಯತ್ನಿಸಿದ ಇಬ್ಬರನ್ನು ಬಂಧಿಸಿರುವ ವರ್ತೂರು ಪೊಲೀಸರು 2 ವಿಗ್ರಹ ಹಾಗೂ 1 ಪಚ್ಚೆಕಲ್ಲು ವಶಪಡಿಸಿಕೊಂಡಿದ್ದಾರೆ...

ಬೆಂಗಳೂರು: ಆನೆ ದಂತದಿಂದ ತಯಾರಿಸಿದ ಬುದ್ಧನ ವಿಗ್ರಹಗಳ ಮಾರಾಟಕ್ಕೆ ಯತ್ನಿಸಿದ ಇಬ್ಬರನ್ನು ಬಂಧಿಸಿರುವ ವರ್ತೂರು ಪೊಲೀಸರು 2 ವಿಗ್ರಹ ಹಾಗೂ 1 ಪಚ್ಚೆಕಲ್ಲು ವಶಪಡಿಸಿಕೊಂಡಿದ್ದಾರೆ.

ಕನಕಪುರದ ಮಹದೇವಪ್ರಸಾದ್(46), ಪ್ರಶಾಂತ್ ಕುಮಾರ್(27) ಬಂಧಿತರು. ಸರ್ಜಾಪುರ ಸಮೀಪದ ಮುತ್ತಾನಲ್ಲೂರು ಕ್ರಾಸ್‍ನಲ್ಲಿ ವಿಗ್ರಹ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಮಹಾದೇವಪ್ರಸಾದ್‍ನನ್ನು ಬಂಧಿಸಿದ್ದಾರೆ. ಆತ ನೀಡಿದ ಮಾಹಿತಿ ಮೇಲೆ ಪ್ರಶಾಂತ ಮನೆ ಮೇಲೆ ದಾಳಿ ನಡೆಸಿ ಮತ್ತೊಂದು ವಿಗ್ರಹ ಹಾಗೂ ಸೈಜ್‍ಕಲ್ಲಿನ ಗಾತ್ರದ ಪೆಚ್ಚಕಲ್ಲು ವಶಪಡಿಸಿಕೊಂಡಿದ್ದಾರೆ. ಕಳ್ಳ ಮಾರುಕಟ್ಟೆಯಲ್ಲಿ ಇವುಗಳ ಬೆಲೆ ಸುಮಾರು ರು.12ರಿಂದ ರು.13 ಲಕ್ಷ ಇದೆ ಎಂದು ಆಗ್ನೇಯ ಡಿಸಿಪಿ ರೋಹಿಣಿ ಕಟೋಚ್ ತಿಳಿಸಿದ್ದಾರೆ.

ಐಪಿಎಲ್ ಬೆಟ್ಟಿಂಗ್: ಬಂಧನ
ಬೆಂಗಳೂರು: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿ ರು.1.5 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ಮೋಹನ್ ಕುಮಾರ್(38) ಹಾಗೂ ರಾಜು(34) ಬಂಧಿತರು. ಆರೋಪಿಗಳು ನಾಗರಬಾವಿ 12ನೇ ಬ್ಲಾಕ್‍ನಲ್ಲಿರುವ ಮನೆಯಲ್ಲಿ ಗುರುವಾರ(ಏ.30) ಕೊಲ್ಕತ್ತಾ ಹಾಗೂ ಚೆನ್ನೈ ನಡುವೆ ನಡುವಿನ ಪಂದ್ಯಕ್ಕೆ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದರು. ರು.1.50 ಲಕ್ಷ ನಗದು, 8 ಮೊಬೈಲ್ ಫೋನ್‍ಗಳು, 1 ಲ್ಯಾಪ್‍ಟಾಪ್, 1 ಟಿವಿ ವಶಪಡಿಸಿಕೊಂಡಿದ್ದಾರೆ. ಜ್ಞಾನಭಾರತಿ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT