ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ 
ಜಿಲ್ಲಾ ಸುದ್ದಿ

ಕಸ ಮುಕ್ತವಾಗದಿದ್ದರೆ ದಂಡ, ಖಾತಾ ರದ್ದು

ಖಾಲಿ ನಿವೇಶನ ಹೊಂದಿರುವ ಮಾಲೀಕರು ಕಸ ಹಾಗೂ ಕಟ್ಟಡ ಅವಶೇಷ ತೆರವುಗೊಳಿಸಿ ಸ್ವಚ್ಛತೆ ಕಾಪಾಡದಿದ್ದರೆ ದಂಡ ವಿಧಿಸಿ, ಖಾತಾ ರದ್ದು ಮಾಡಲಾಗುವುದು ಎಂದು ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ಎಚ್ಚರಿಸಿದ್ದಾರೆ...

ಬೆಂಗಳೂರು: ಖಾಲಿ ನಿವೇಶನ ಹೊಂದಿರುವ ಮಾಲೀಕರು ಕಸ ಹಾಗೂ ಕಟ್ಟಡ ಅವಶೇಷ ತೆರವುಗೊಳಿಸಿ ಸ್ವಚ್ಛತೆ ಕಾಪಾಡದಿದ್ದರೆ ದಂಡ ವಿಧಿಸಿ, ಖಾತಾ ರದ್ದು ಮಾಡಲಾಗುವುದು ಎಂದು ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ಎಚ್ಚರಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ 47 ವಾರ್ಡ್ ಗಳಲ್ಲಿ ಶನಿವಾರ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮ ಪರಿಶೀಲಿಸಿ, ಖಾಲಿ ನಿವೇಶನಗಳಲ್ಲಿ ಸಾರ್ವಜನಿಕರು ಕಸ ಹಾಗೂ ಕಟ್ಟಡ ತ್ಯಾಜ್ಯ ಹಾಕುತ್ತಿದ್ದಾರೆ.

ನಿವೇಶನ ಸ್ವಚ್ಛವಾಗಿಟ್ಟುಕೊಳ್ಳಲು ಹಾಗೂ ನಿವೇಶನಕ್ಕೆ ತಂತಿ ಬೇಲಿ ಅಳವಡಿಸಲು ಕೆಲವು ಮಾಲೀಕರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಮೊದಲು ಖಾಲಿ ನಿವೇಶನದ ಮಾಲೀಕರಿಗೆ ನೋಟಿಸ್ ನೀಡಿ ನಿವೇಶನ ಸ್ವಚ್ಛವಾಗಿರಿಸಿಕೊಳ್ಳುವಂತೆ ಸೂಚಿಸಬೇಕು. ಸ್ವಚ್ಛತೆ ಕಾಪಾಡದಿದ್ದರೆ ದಂಡ ವಿಧಿಸಿ ಖಾತಾ ರದ್ದುಪಡಿಸಬೇಕು ಎಂದು ಎಂಜಿನಿಯರ್ ಗಳಿಗೆ ಸೂಚಿಸಿದರು. ನಂತರ ಸುದ್ಧಿಗಾರರೊಂದಿಗೆ ಮಾತನಾಡಿ, ವಿಜಯಭಾಸ್ಕರ್, ಕಸ ವಿಲೇವಾರಿ ಸೂಕ್ತವಾಗಿ ಆಗುವಂತೆ ಅಭಿಯಾನ ಕೈಗೊಳ್ಳಲಾಗಿದೆ. 28 ವಿಧಾನ ಸಭಾ ಕ್ಷೇತ್ರಗಳಲ್ಲೂ ಅಬಿಯಾನ ನಡೆಯಲಿದೆ ಎಂದರು. ಆಯುಕ್ತ ಜಿ.ಕುಮಾರ್ ನಾಯಕ್ ವಿವಿಧ ವಾರ್ಡ್ ಗಳನ್ನು ಪರಿಶೀಲಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT