ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಕೋರ್ಟ್ ಆವರಣದಲ್ಲೇ ಬಂಧನ

ನ್ಯಾಯಾಯಕ್ಕೆ ಶರಣಾಗಲು ಬುಧವಾರ ಆಗಮಿಸಿದ್ದ ಕೊಲೆ ಆರೋಪಿಯನ್ನು ಪೊಲೀಸರು ನ್ಯಾಯಾಲಯದ ಆವರಣದಲ್ಲೇ ಬಂಧಿಸಿದ್ದಾರೆ...

ರಾಮನಗರ: ನ್ಯಾಯಾಲಯಕ್ಕೆ ಶರಣಾಗಲು ಬುಧವಾರ ಆಗಮಿಸಿದ್ದ ಕೊಲೆ ಆರೋಪಿಯನ್ನು ಪೊಲೀಸರು ನ್ಯಾಯಾಲಯದ ಆವರಣದಲ್ಲೇ ಬಂಧಿಸಿದ್ದಾರೆ.

ಇಲ್ಲಿನ ಬೀಡಿ ಕಾಲೋನಿಯ ನಿವಾಸಿ ಗೋರು ಬಂಧಿತ ಆರೋಪಿ. ಮೇ 3ರಂದು ರೋಹಿದ್ (25) ಎಂಬ ಯುವಕನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಗೋರು ಪ್ರಮುಖ ಆರೋಪಿಯಾಗಿದ್ದ. ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಇದನ್ನು ತಿಳಿದ ಗೋರು ನ್ಯಾಯಾಲಯಕ್ಕೆ ಶರಣಾಗಲು ಮೈಸೂರಿನ ವಕೀಲರೊಂದಿಗೆ ನ್ಯಾಯಾಲಯದ ಆವರಣ ಪ್ರವೇಶಿಸುತ್ತಿದ್ದಂತೆ, ಸಿಪಿಐ ಸುಬ್ರಹ್ಮಣ್ಯ ನೇತೃತ್ವದ ಪೊಲೀಸರ ತಂಡ ಆರೋಪಿ ಬಂಧನಕ್ಕೆ ಮುಂದಾಗಿದ್ದಾರೆ.

ಈ ವೇಳೆ ಆರೋಪಿ ಪರ ವಕೀಲರು ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ನ್ಯಾಯಾಲಯದ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಮಧ್ಯೆ ಪ್ರವೇಶಿಸಿದ ಸ್ಥಳೀಯ ವಕೀಲರು ಆರೋಪಿ ಬಂಧನಕ್ಕೆ ಅನುವು ಮಾಡಿ ಕೊಟ್ಟರು. ಬಂಧಿತ ನನ್ನು ವಿಚಾರಣೆಗೊಳ ಪಡಿಸಿದ ನಂತರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT