ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಕೋರ್ಟ್ ಆವರಣದಲ್ಲೇ ಬಂಧನ

ನ್ಯಾಯಾಯಕ್ಕೆ ಶರಣಾಗಲು ಬುಧವಾರ ಆಗಮಿಸಿದ್ದ ಕೊಲೆ ಆರೋಪಿಯನ್ನು ಪೊಲೀಸರು ನ್ಯಾಯಾಲಯದ ಆವರಣದಲ್ಲೇ ಬಂಧಿಸಿದ್ದಾರೆ...

ರಾಮನಗರ: ನ್ಯಾಯಾಲಯಕ್ಕೆ ಶರಣಾಗಲು ಬುಧವಾರ ಆಗಮಿಸಿದ್ದ ಕೊಲೆ ಆರೋಪಿಯನ್ನು ಪೊಲೀಸರು ನ್ಯಾಯಾಲಯದ ಆವರಣದಲ್ಲೇ ಬಂಧಿಸಿದ್ದಾರೆ.

ಇಲ್ಲಿನ ಬೀಡಿ ಕಾಲೋನಿಯ ನಿವಾಸಿ ಗೋರು ಬಂಧಿತ ಆರೋಪಿ. ಮೇ 3ರಂದು ರೋಹಿದ್ (25) ಎಂಬ ಯುವಕನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಗೋರು ಪ್ರಮುಖ ಆರೋಪಿಯಾಗಿದ್ದ. ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಇದನ್ನು ತಿಳಿದ ಗೋರು ನ್ಯಾಯಾಲಯಕ್ಕೆ ಶರಣಾಗಲು ಮೈಸೂರಿನ ವಕೀಲರೊಂದಿಗೆ ನ್ಯಾಯಾಲಯದ ಆವರಣ ಪ್ರವೇಶಿಸುತ್ತಿದ್ದಂತೆ, ಸಿಪಿಐ ಸುಬ್ರಹ್ಮಣ್ಯ ನೇತೃತ್ವದ ಪೊಲೀಸರ ತಂಡ ಆರೋಪಿ ಬಂಧನಕ್ಕೆ ಮುಂದಾಗಿದ್ದಾರೆ.

ಈ ವೇಳೆ ಆರೋಪಿ ಪರ ವಕೀಲರು ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ನ್ಯಾಯಾಲಯದ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಮಧ್ಯೆ ಪ್ರವೇಶಿಸಿದ ಸ್ಥಳೀಯ ವಕೀಲರು ಆರೋಪಿ ಬಂಧನಕ್ಕೆ ಅನುವು ಮಾಡಿ ಕೊಟ್ಟರು. ಬಂಧಿತ ನನ್ನು ವಿಚಾರಣೆಗೊಳ ಪಡಿಸಿದ ನಂತರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT