ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ನಿಗೂಢ ಕೊಲೆ ಪ್ರಕರಣ ಭೇದಿಸಿದ ಪೊಲೀಸರು

ಬರೋಬ್ಬರಿ ಒಂದು ವರ್ಷದ ಹಿಂದೆ ಬಾಣಸವಾಡಿ ಸಮೀಪದ ಕಾಚರಕನಹಳ್ಳಿಯಲ್ಲಿ ನಡೆದಿದ್ದ ಒಂಟಿ ವೃದ್ದೆ ಮೇರಿ ಲೂಕೋಸ್(67) ಕೊಲೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಬಾಣಸವಾಡಿ ಪೊಲೀಸರು ಯಶಸ್ವಿಯಾಗಿದ್ದಾರೆ...

ಬೆಂಗಳೂರು: ಬರೋಬ್ಬರಿ ಒಂದು ವರ್ಷದ ಹಿಂದೆ ಬಾಣಸವಾಡಿ ಸಮೀಪದ ಕಾಚರಕನಹಳ್ಳಿಯಲ್ಲಿ ನಡೆದಿದ್ದ ಒಂಟಿ ವೃದ್ದೆ ಮೇರಿ ಲೂಕೋಸ್(67) ಕೊಲೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಬಾಣಸವಾಡಿ ಪೊಲೀಸರು ಯಶಸ್ವಿಯಾಗಿದ್ದಾರೆ.

ತಮಿಳುನಾಡಿನ ಧರ್ಮಪುರಿ ಹಾಗೂ ಕೇರಳದ ಪಾಲಕ್ಕಾಡ್ ಮೂಲದ ತಂಗರಾಜ್, ಪ್ರಭು, ವಿಜಿ ಬಂಧಿತರು. 2014ರ ಏ.29ರಂದು ಆರೋಪಿ ಗಳು ಕಾಚರಕನಹಳ್ಳಿಯಲ್ಲಿರುವ ಜ್ಯೋತಿ ಶಾಲೆ ಸಮೀಪ ವಾಸವಿದ್ದ ಮೇರಿ ಅವರ ಕೈ ಕಾಲು ಕಟ್ಟಿ ಹಾಕಿ ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. 8 ವರ್ಷದ ಹಿಂದೆ ಪತಿ ಮೃತಪಟ್ಟ ಬಳಿಕ ಎರಡಂತಸ್ತಿನ ಕಟ್ಟಡದಲ್ಲಿ ಒಂಟಿಯಾಗಿದ್ದ ಮೇರಿ, ಐದು ಕೊಠಡಿಗಳ ಪೈಕಿ ಒಂದರಲ್ಲಿ ಅವರು ವಾಸವಿದ್ದು ಉಳಿದ ನಾಲ್ಕು ಕೊಠಡಿಗಳನ್ನು ನಗರಕ್ಕೆ ಬರುವ ತಮಗೆ ಪರಿಚಿತರಾಗಿರುವವರಿಗೆ ಬಾಡಿಗೆ ನೀಡುತ್ತಿದ್ದರು.

ಅವರಿಂದ ದಿನಕ್ಕೆ ರು.250ರಿಂದ ರು.300 ಬಾಡಿಗೆ ಪಡೆಯುತ್ತಿದ್ದರು. ಮೇರಿ ಅವರಿಗೆ ಇಬ್ಬರು ಮಕ್ಕಳಿದ್ದು ಪ್ರತ್ಯೇಕವಾಗಿ ವಾಸವಿದ್ದರು. ಏ.29ರಂದು ಬೆಳಗ್ಗೆ ಕೇರಳ ಮೂಲದ ಇಬ್ಬರು
ಹುಡುಗರು ಕೊಠಡಿಗೆ ಬಂದಿದ್ದರು. ಒಂದು ತಾಸಿನ ಬಳಿಕ ಇಬ್ಬರು ಹೊರಗೆ ಹೋಗಿದ್ದರು. ಮತ್ತೆ 1.30ರ ಸುಮಾರಿಗೆ ಕೊಠಡಿಗೆ ವಾಪಸ್ ಬಂದು ಕೀಲಿಯನ್ನು ಮೇರಿ ಅವರ ಕೈಗೆ ನೀಡಿ ಊಟಕ್ಕೆ ತೆರಳಿದ್ದರು. ಊಟ ಮುಗಿಸಿ ವಾಪಸ್ ಬಂದಾಗ ಕೊಠಡಿಯಲ್ಲಿ ಮೇರಿ ಕೊಲೆಯಾಗಿ ಬಿದ್ದಿದ್ದರು. ಆರೋಪಿಗಳು ಮೇರಿ ಅವರನ್ನು ಹತ್ಯೆ ಗೈದ ನಂತರ ಮೈ ಮೇಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಬಂಧಿತ ಆರೋಪಿಗಳು ಕೂಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆರೋಪಿಗಳ ಬಂಧನದಿಂದ ವರ್ತೂರಲ್ಲಿ ನಡೆದಿದ್ದ ಮಹಿಳೆ ಕೊಲೆ ಪ್ರಕರಣವೂ ಬೆಳಕಿಗೆ ಬಂದಿದೆ. ಇನ್ನೂ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ವಿಚಾರಣೆ ಮುಂದುವರಿದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT