ಮರು ಮತಾಂತರಗೊಂಡ ಕುಟುಂಬ 
ಜಿಲ್ಲಾ ಸುದ್ದಿ

ಹಿಂದೂ ಧರ್ಮಕ್ಕೆ ಮರು ಮತಾಂತರಗೊಂಡ ಕ್ರೈಸ್ತ ಕುಟುಂಬ

ಕ್ರೈಸ್ತ ಸಮುದಾಯದ ಯುವಕನನ್ನು ಮದುವೆಯಾದ ಬಳಿಕ ಕ್ರೈಸ್ತ ಧರ್ಮವನ್ನು ಪಾಲಿಸುತ್ತಿದ್ದ ಕುಟುಂಬವೊಂದು ಮತ್ತೆ ಹಿಂದೂ ಧರ್ಮಕ್ಕೆ ಮರು ಮತಾಂತರಗೊಂಡಿದೆ.

ಮಂಗಳೂರು: ಕ್ರೈಸ್ತ ಸಮುದಾಯದ ಯುವಕನನ್ನು ಮದುವೆಯಾದ ಬಳಿಕ ಕ್ರೈಸ್ತ ಧರ್ಮವನ್ನು ಪಾಲಿಸುತ್ತಿದ್ದ ಕುಟುಂಬವೊಂದು ಮತ್ತೆ ಹಿಂದೂ ಧರ್ಮಕ್ಕೆ ಮರು ಮತಾಂತರಗೊಂಡಿದೆ.

ಮಂಗಳೂರು ನಗರದ ಉಳ್ಳಾಲದ ಮೂಲದ ಸರಸ್ವತಿ ಎಂಬುವರು ಕ್ರೈಸ್ತ ಸಮುದಾಯದ ರಾಜು ಎಂಬುವರನ್ನು ಪ್ರೇಮ ವಿವಾಹವಾಗಿದ್ದರು. ಮುಂದೆ ಕ್ರೈಸ್ತ ಧರ್ಮವನ್ನು ಪಾಲಿಸುತ್ತಾ, ಎಲ್ಯಾರ್ ನಲ್ಲಿರುವ ಚರ್ಚ್ ನಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ ಕ್ರೈಸ್ತ ಧರ್ಮದ ಸಂಪ್ರದಾಯಗಳನ್ನು ಪಾಲಿಸುತ್ತಿದ್ದರು.

ಸರಸ್ವತಿ ಅವರ ಪತಿ ರಾಜು ಅವರು 9 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಆ ಬಳಿಕ ಸರಸ್ವತಿ ಮತ್ತು ನಾಲ್ವರು ಮಕ್ಕಳು ಸಾಯಿ ಮಂದಿರಕ್ಕೆ ಹೋಗಲು ಆರಂಭಿಸಿದ್ದು, ಬಹುತೇಕ ಹಿಂದೂ ಕಾರ್ಯಕ್ರಮಗಳಲ್ಲಿ ಕುಟುಂಬ ಭಾಗಿಯಾಗುತ್ತಿತ್ತು. ಹೀಗೆ ಹಿಂದೂ ಧರ್ಮವನ್ನು ಪಾಲಿಸುತ್ತಿದ್ದ ಅವರು ಹಿಂದೂ ಧರ್ಮಕ್ಕೆ ಮತಾಂತರಗೊಳ್ಳಲು ಇಚ್ಛಿಸಿದ್ದರು.

ಹೀಗಾಗಿ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರಸ್ವತಿ ಕುಟುಂಬ ಹಿಂದೂ ಧರ್ಮದ ಸಾಂಪ್ರದಾಯಿಕ ಹೋಮ-ಹವನ ಮಾಡುವ ಮೂಲಕ ಅಧಿಕೃತವಾಗಿ ಹಿಂದೂ ಧರ್ಮಕ್ಕೆ ಮರು ಮತಾಂತರಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT