ಮರು ಮತಾಂತರಗೊಂಡ ಕುಟುಂಬ 
ಜಿಲ್ಲಾ ಸುದ್ದಿ

ಹಿಂದೂ ಧರ್ಮಕ್ಕೆ ಮರು ಮತಾಂತರಗೊಂಡ ಕ್ರೈಸ್ತ ಕುಟುಂಬ

ಕ್ರೈಸ್ತ ಸಮುದಾಯದ ಯುವಕನನ್ನು ಮದುವೆಯಾದ ಬಳಿಕ ಕ್ರೈಸ್ತ ಧರ್ಮವನ್ನು ಪಾಲಿಸುತ್ತಿದ್ದ ಕುಟುಂಬವೊಂದು ಮತ್ತೆ ಹಿಂದೂ ಧರ್ಮಕ್ಕೆ ಮರು ಮತಾಂತರಗೊಂಡಿದೆ.

ಮಂಗಳೂರು: ಕ್ರೈಸ್ತ ಸಮುದಾಯದ ಯುವಕನನ್ನು ಮದುವೆಯಾದ ಬಳಿಕ ಕ್ರೈಸ್ತ ಧರ್ಮವನ್ನು ಪಾಲಿಸುತ್ತಿದ್ದ ಕುಟುಂಬವೊಂದು ಮತ್ತೆ ಹಿಂದೂ ಧರ್ಮಕ್ಕೆ ಮರು ಮತಾಂತರಗೊಂಡಿದೆ.

ಮಂಗಳೂರು ನಗರದ ಉಳ್ಳಾಲದ ಮೂಲದ ಸರಸ್ವತಿ ಎಂಬುವರು ಕ್ರೈಸ್ತ ಸಮುದಾಯದ ರಾಜು ಎಂಬುವರನ್ನು ಪ್ರೇಮ ವಿವಾಹವಾಗಿದ್ದರು. ಮುಂದೆ ಕ್ರೈಸ್ತ ಧರ್ಮವನ್ನು ಪಾಲಿಸುತ್ತಾ, ಎಲ್ಯಾರ್ ನಲ್ಲಿರುವ ಚರ್ಚ್ ನಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ ಕ್ರೈಸ್ತ ಧರ್ಮದ ಸಂಪ್ರದಾಯಗಳನ್ನು ಪಾಲಿಸುತ್ತಿದ್ದರು.

ಸರಸ್ವತಿ ಅವರ ಪತಿ ರಾಜು ಅವರು 9 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಆ ಬಳಿಕ ಸರಸ್ವತಿ ಮತ್ತು ನಾಲ್ವರು ಮಕ್ಕಳು ಸಾಯಿ ಮಂದಿರಕ್ಕೆ ಹೋಗಲು ಆರಂಭಿಸಿದ್ದು, ಬಹುತೇಕ ಹಿಂದೂ ಕಾರ್ಯಕ್ರಮಗಳಲ್ಲಿ ಕುಟುಂಬ ಭಾಗಿಯಾಗುತ್ತಿತ್ತು. ಹೀಗೆ ಹಿಂದೂ ಧರ್ಮವನ್ನು ಪಾಲಿಸುತ್ತಿದ್ದ ಅವರು ಹಿಂದೂ ಧರ್ಮಕ್ಕೆ ಮತಾಂತರಗೊಳ್ಳಲು ಇಚ್ಛಿಸಿದ್ದರು.

ಹೀಗಾಗಿ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರಸ್ವತಿ ಕುಟುಂಬ ಹಿಂದೂ ಧರ್ಮದ ಸಾಂಪ್ರದಾಯಿಕ ಹೋಮ-ಹವನ ಮಾಡುವ ಮೂಲಕ ಅಧಿಕೃತವಾಗಿ ಹಿಂದೂ ಧರ್ಮಕ್ಕೆ ಮರು ಮತಾಂತರಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ