ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ನೀರು, ರಸ್ತೆ ಅಭಿವೃದ್ಧಿಗೆ ರು.216 ಕೋಟಿ

ಗ್ರಾಮೀಣ ಪ್ರದೇಶಗಳ ಕುಡಿಯುವ ನೀರು ಹಾಗೂ ರಸ್ತೆ ಅಭಿವೃದ್ಧಿಗೆ ರಾಜ್ಯ ಸರ್ಕಾರ ರು.216.27 ಕೋಟಿ ಬಿಡುಗಡೆ ಮಾಡಿದೆ...

ಬೆಂಗಳೂರು: ಗ್ರಾಮೀಣ ಪ್ರದೇಶಗಳ ಕುಡಿಯುವ ನೀರು ಹಾಗೂ ರಸ್ತೆ ಅಭಿವೃದ್ಧಿಗೆ ರಾಜ್ಯ ಸರ್ಕಾರ ರು.216.27 ಕೋಟಿ ಬಿಡುಗಡೆ ಮಾಡಿದೆ.

ತಾಲೂಕುವಾರು ಹಣ ಬಿಡುಗಡೆ ಮಾಡುತ್ತಿದ್ದು, ಕುಡಿಯುವ ನೀರು ಹಾಗೂ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ರಾಜ್ಯ ಸರ್ಕಾರದ ಈ ಘೋಷಣೆಗೂ ಪಂಚಾಯತ್
ಚುನಾವಣೆಗೂ ಯಾವುದೇ ಸಂಬಂಧವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್. ಕೆ.ಪಾಟೀಲ್ ತಿಳಿಸಿದ್ದಾರೆ.

ಕುಡಿಯುವ ನೀರಿಗಾಗಿ ಪ್ರತಿ ತಾಲೂಕಿಗೆ ರು.40ರಿಂದ ರು.45 ಲಕ್ಷದವರೆಗೆ ಹಣ ಬಿಡುಗಡೆ ಮಾಡಲಾಗಿದೆ. ರಸ್ತೆ ಅಭಿವೃದ್ಧಿಗೆ ಪ್ರತಿ ತಾಲೂಕಿಗೆ ರು.30 ಲಕ್ಷದಿಂದ ರು.2 ಕೋಟಿವರೆಗೂ ಅನುದಾನ ಕೊಡುತ್ತಿದ್ದೇವೆ. ತಾಲೂಕಿನಲ್ಲಿ ಅಸ್ತಿತ್ವದಲ್ಲಿರುವ ಕಾರ್ಯಪಡೆ ಮೂಲಕ ಯೋಜನೆ ಅನುಷ್ಠಾನಕ್ಕೆ ತರಲಾಗುವುದು ಎಂದು ವಿಧಾನಸೌಧದಲ್ಲಿ ಎಚ್.ಕೆ.ಪಾಟೀಲ್ ಶುಕ್ರವಾರ ಹೇಳಿದರು.

ಕೆಲ ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಾಗಿದ್ದರೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡುತ್ತಿದೆ. ಕಾರ್ಯಪಡೆ ಮೂಲಕ ಕೊಳವೆಬಾವಿ ಕೊರೆಯುವುದು, ನೀರಿನ ಪೈಪ್ ಅಳವಡಿಕೆ ಹಾಗೂ ನೀರು ಸರಬರಾಜು ಚಟುವಟಿಕೆಯನ್ನು ಈ ಅನುದಾನದಿಂದ ಮಾಡಬಹುದಾಗಿದೆ. ರಾಜ್ಯ ಸರ್ಕಾರ ಈ ಹಿಂದೆ ಬಿಡುಗಡೆ ಮಾಡಿರುವ ಹಣವನ್ನು ಬಳಕೆ ಮಾಡಿರುವ ಮಾಹಿತಿ ಪಡೆದು ಈ ಅನುದಾನ ಕಾರ್ಯಪಡೆಗೆ ದೊರೆಯಲಿದೆ.

ರಾಜ್ಯದಲ್ಲಿರುವ 1.55 ಲಕ್ಷ ಕಿಮೀ ಗ್ರಾಮೀಣ ರಸ್ತೆ ಅಭಿವೃದ್ಧಿ ಹಾಗೂ ದುರಸ್ತಿ ಮಾಡಬೇಕಿದೆ. ಡಾಂಬರ್ ರಸ್ತೆ ದುರಸ್ತಿಗೆ ಪ್ರತಿ ಕಿಮೀಗೆ ರು.12 ಸಾವಿರ, ಜೆಲ್ಲಿ ರಸ್ತೆ ಪ್ರತಿ ಕಿಮೀಗೆ ರು.7 ಸಾವಿರ ಹಾಗೂ ಮಣ್ಣು ರಸ್ತೆಗೆ ಪ್ರತಿ ಕಿಮೀಗೆ ರು.6 ಸಾವಿರ ನೀಡಲಾಗುತ್ತದೆ. ಈ ಯೋಜನೆಗೆ ಸಂಬಂಧಿಸಿದ ಹಣವನ್ನು ಮೇ 5ರಂದು ಬಿಡುಗಡೆ ಮಾಡಲಾಗಿದೆ ಎಂದರು.

ಬಜೆಟಲ್ಲಿ ಹೇಳಿದಂತೆ ಜಿಲ್ಲಾ ಯೋಜನಾ ಸಮಿತಿಗಳ ಕಾರ್ಯ ವಿಧಾನ ಹಾಗೂ ಬೇರು ಮಟ್ಟದ ಯೋಜನಾ ಪರಿಶೀಲನೆಗೆ ರಾಜ್ಯ ಮಟ್ಟದಲ್ಲಿ ಕಾರ್ಯಪಡೆ ರಚಿಸಿ ಸರ್ಕಾರ ಆದೇಶಿಸಿದೆ. ಗ್ರಾಮೀಣಾಭಿವೃದ್ಧಿ ಸಚಿವರ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ಅಸ್ತಿತ್ವಕ್ಕೆ ಬಂದಿದ್ದು, ಇನ್ನೂ 13 ಸದಸ್ಯರು ಜತೆಗಿರುತ್ತಾರೆ. ಈ ಪಡೆಯು ತ್ರೈಮಾಸಿಕ ಸಭೆ ನಡೆಸಿ ಯೋಜನೆಗಳ
ಪರಿಶೀಲನೆ ನಡೆಸಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?