ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ನ ಗೌರವ ಕಾರ್ಯದರ್ಶಿ ವಸುಂಧರಾ ಭೂಪತಿ 
ಜಿಲ್ಲಾ ಸುದ್ದಿ

ಮಿಡ್ ಬ್ರೇನ್ ಆ್ಯಕ್ಟಿವೇಶನ್ ಹೆಸರಿನಲ್ಲಿ ಸಾರ್ವಜನಿಕರಿಗೆ ವಂಚನೆ

ಮಕ್ಕಳ ಐಕ್ಯೂ ಹೆಚ್ಚಿಸುವ ಹೆಸರಿನಲ್ಲಿ ಪೋಷಕರನ್ನು ಹಾಗೂ ಸಾರ್ವಜನಿಕರನ್ನು ಹಲವಾರು ಸಂಸ್ಥೆಗಳು ವಂಚಿಸುತ್ತಿದ್ದು, ಇದರ ಅರಿವು...

ಬೆಂಗಳೂರು: ಮಕ್ಕಳ ಐಕ್ಯೂ ಹೆಚ್ಚಿಸುವ ಹೆಸರಿನಲ್ಲಿ ಪೋಷಕರನ್ನು ಹಾಗೂ ಸಾರ್ವಜನಿಕರನ್ನು ಹಲವಾರು ಸಂಸ್ಥೆಗಳು ವಂಚಿಸುತ್ತಿದ್ದು, ಇದರ ಅರಿವು ಮೂಡಿಸಲೆಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜನಜಾಗೃತಿ ಕಾರ್ಯಕ್ರಮವನ್ನು ಮೇ 12ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಂಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ ನ ಗೌರವ ಕಾರ್ಯದರ್ಶಿ ಡಾ.ವಸುಂಧರಾ ಭೂಪತಿ, ಇತ್ತೀಚೆಗೆ ಮಕ್ಕಳಿಗೆ ಐಕ್ಯೂ ಹೆಚ್ಚಿಸುತ್ತೇವೆ ಎಂದು ವಿವಿಧ ಸಂಸ್ಥೆಗಳು ಪೋಷಕರನ್ನು ಸುಲಿಗೆ ಮಾಡುತ್ತಿವೆ ಪ್ರತಿ ವಿದ್ಯಾರ್ಥಿಗೆ 25 ಸಾವಿರದಿಂದ 50 ಸಾವಿರದವರೆಗೆ ಶುಲ್ಕ ವಿಧಿಸುತ್ತಿದೆ. ತಜ್ಞ ವೈದ್ಯರ ಪ್ರಕಾರ ಮಿಡ್ ಬ್ರೇನ್ ಆ್ಯಕ್ಟಿವೇಶನ್ ಮಾಡಲು ಸಾಧ್ಯವಿಲ್ಲ.
ಪೋಷಕರು ತಮ್ಮ ಮಕ್ಕಳ ಬುದ್ಧಿಶಕ್ತಿ ಹೆಚ್ಚಲಿ ಎಂದು ಮೋಸ ಹೋಗುತ್ತಿದ್ದಾರೆ.

ಈ ಸಂಬಂಧ ಜನಜಾಗೃತಿ ಮೂಡಿಸಲೆಂದು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬನಶಂಕರಿ 2ನೇ ಹಂತದಲ್ಲಿರುವ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಪ್ರೊ|ಎಂ.ಎ ಸೇತುರಾವ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಖ್ಯಾತ ವಿಚಾರವಾದಿ ಡಾ.ನರೇಂದ್ರ ನಾಯಕ್, ಮನೋವೈದ್ಯ ಡಾ.ಸಿ.ಆರ್.ಚಂದ್ರಶೇಖರ್, ನಿಮ್ಹಾನ್ಸ್ ನ ಮನಃಶಾಸ್ತ್ರ ವಿಭಾಗದ ಪ್ರಾಧ್ಯಪಕ ಡಾ.ಜೆ ಕೇಶವ್ ಕುಮಾರ್ ಹಾಗೂ ನಕುಲ್ ಶೆಣೈ ಅವರು ಸಾರ್ವಜನಿಕರಿಗೆ ಮಾಹಿತಿ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್