ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ನ ಗೌರವ ಕಾರ್ಯದರ್ಶಿ ವಸುಂಧರಾ ಭೂಪತಿ 
ಜಿಲ್ಲಾ ಸುದ್ದಿ

ಮಿಡ್ ಬ್ರೇನ್ ಆ್ಯಕ್ಟಿವೇಶನ್ ಹೆಸರಿನಲ್ಲಿ ಸಾರ್ವಜನಿಕರಿಗೆ ವಂಚನೆ

ಮಕ್ಕಳ ಐಕ್ಯೂ ಹೆಚ್ಚಿಸುವ ಹೆಸರಿನಲ್ಲಿ ಪೋಷಕರನ್ನು ಹಾಗೂ ಸಾರ್ವಜನಿಕರನ್ನು ಹಲವಾರು ಸಂಸ್ಥೆಗಳು ವಂಚಿಸುತ್ತಿದ್ದು, ಇದರ ಅರಿವು...

ಬೆಂಗಳೂರು: ಮಕ್ಕಳ ಐಕ್ಯೂ ಹೆಚ್ಚಿಸುವ ಹೆಸರಿನಲ್ಲಿ ಪೋಷಕರನ್ನು ಹಾಗೂ ಸಾರ್ವಜನಿಕರನ್ನು ಹಲವಾರು ಸಂಸ್ಥೆಗಳು ವಂಚಿಸುತ್ತಿದ್ದು, ಇದರ ಅರಿವು ಮೂಡಿಸಲೆಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜನಜಾಗೃತಿ ಕಾರ್ಯಕ್ರಮವನ್ನು ಮೇ 12ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಂಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ ನ ಗೌರವ ಕಾರ್ಯದರ್ಶಿ ಡಾ.ವಸುಂಧರಾ ಭೂಪತಿ, ಇತ್ತೀಚೆಗೆ ಮಕ್ಕಳಿಗೆ ಐಕ್ಯೂ ಹೆಚ್ಚಿಸುತ್ತೇವೆ ಎಂದು ವಿವಿಧ ಸಂಸ್ಥೆಗಳು ಪೋಷಕರನ್ನು ಸುಲಿಗೆ ಮಾಡುತ್ತಿವೆ ಪ್ರತಿ ವಿದ್ಯಾರ್ಥಿಗೆ 25 ಸಾವಿರದಿಂದ 50 ಸಾವಿರದವರೆಗೆ ಶುಲ್ಕ ವಿಧಿಸುತ್ತಿದೆ. ತಜ್ಞ ವೈದ್ಯರ ಪ್ರಕಾರ ಮಿಡ್ ಬ್ರೇನ್ ಆ್ಯಕ್ಟಿವೇಶನ್ ಮಾಡಲು ಸಾಧ್ಯವಿಲ್ಲ.
ಪೋಷಕರು ತಮ್ಮ ಮಕ್ಕಳ ಬುದ್ಧಿಶಕ್ತಿ ಹೆಚ್ಚಲಿ ಎಂದು ಮೋಸ ಹೋಗುತ್ತಿದ್ದಾರೆ.

ಈ ಸಂಬಂಧ ಜನಜಾಗೃತಿ ಮೂಡಿಸಲೆಂದು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬನಶಂಕರಿ 2ನೇ ಹಂತದಲ್ಲಿರುವ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಪ್ರೊ|ಎಂ.ಎ ಸೇತುರಾವ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಖ್ಯಾತ ವಿಚಾರವಾದಿ ಡಾ.ನರೇಂದ್ರ ನಾಯಕ್, ಮನೋವೈದ್ಯ ಡಾ.ಸಿ.ಆರ್.ಚಂದ್ರಶೇಖರ್, ನಿಮ್ಹಾನ್ಸ್ ನ ಮನಃಶಾಸ್ತ್ರ ವಿಭಾಗದ ಪ್ರಾಧ್ಯಪಕ ಡಾ.ಜೆ ಕೇಶವ್ ಕುಮಾರ್ ಹಾಗೂ ನಕುಲ್ ಶೆಣೈ ಅವರು ಸಾರ್ವಜನಿಕರಿಗೆ ಮಾಹಿತಿ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT