ಕಾನೂನು ಸಚಿವ ಟಿ.ಬಿ.ಜಯಚಂದ್ರ 
ಜಿಲ್ಲಾ ಸುದ್ದಿ

ತ್ರಿಭಜನೆ, ಚುನಾವಣೆಗೆ ಸಂಬಂಧವೇ ಇಲ್ಲ: ಟಿ.ಬಿ.ಜಯಚಂದ್ರ

ಬಿಬಿಎಂಪಿಗೆ ಮೂರು ತಿಂಗಳಲ್ಲಿ ಚುನಾವಣೆ ನಡೆಸಬೇಕೆಂದು ನ್ಯಾಯಾಲಯ ನೀಡಿರುವ ನಿರ್ದೇಶನಕ್ಕೂ ಬಿಬಿಎಂಪಿ ವಿಭಜನೆ ವಿಚಾರಕ್ಕೂ ಸಂಬಂಧವೇ ಇಲ್ಲ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅಭಿಪ್ರಾಯಪಟ್ಟಿದ್ದಾರೆ...

ಬೆಂಗಳೂರು: ಬಿಬಿಎಂಪಿಗೆ ಮೂರು ತಿಂಗಳಲ್ಲಿ ಚುನಾವಣೆ ನಡೆಸಬೇಕೆಂದು ನ್ಯಾಯಾಲಯ ನೀಡಿರುವ ನಿರ್ದೇಶನಕ್ಕೂ ಬಿಬಿಎಂಪಿ ವಿಭಜನೆ ವಿಚಾರಕ್ಕೂ ಸಂಬಂಧವೇ ಇಲ್ಲ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ನಗರ ಪಾಲಿಕೆಗಳ ತಿದ್ದುಪಡಿ ವಿಧೇಯಕ-2015 ಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಪರಿಶೀಲನಾ ಸಮಿತಿಯ ಪ್ರಾರಂಭಿಕ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನ್ಯಾಯಾಲಯ ಸೂಚನೆಯಂತೆ ಚುವಾವಣೆ ನಡೆಸಬೇಕಾದ್ದು ಚುನಾವಣಾ ಆಯೋಗದ ಕರ್ತವ್ಯ. ಆದರೆ, ಆಡಳಿತದ ದೃಷ್ಠಿಯಿಂದ ವಿಭಾಗ ಮಾಡಬೇಕೇ ಬೇಡವೇ ಎಂಬುದು ಶಾಸನಸಭೆಗೆ ಬಿಟ್ಟ ವಿಚಾರ.

ಈಗಾಗಲೇ ಪರಿಷತ್ತಿನ ಸದನ ಸಮಿತಿ ರಚನೆಯಾಗಿ ಮೊದಲ ಸಭೆ ನಡೆದಿದೆ. ಮೂರು ಗಂಟೆಗಳ ಕಾಲ ವ್ಯಾಪಕವಾಗಿ ಎಲ್ಲಾ ವಿಚಾರದಲ್ಲೂ ಕೂಡ ಚರ್ಚೆ ಆಯಿತು, ಸದಸ್ಯರೆಲ್ಲರೂ ಕೂಡ ಅವರವರ ವಿಭಿನ್ನ ಅಭಿಪ್ರಾಯ ಸೂಚಿಸಿದ್ದಾರೆ. ಇದು ಒಂದೇ ದಿನಗದಲ್ಲಿ ಮುಗಿಯುವುದಿಲ್ಲ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT