ಹಸಿರು ಬಣ್ಣ (ಪೇಂಟ್) ಬಳಿದಿರುವ ನೀರುಹಕ್ಕಿ (ಫೋಟೋ ಕೃಪೆ : ಪ್ರಶಾಂತ್ ಕುಮಾರ್ ಅವರ ಫೇಸ್‌ಬುಕ್‌ನಿಂದ) 
ಜಿಲ್ಲಾ ಸುದ್ದಿ

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರುಹಕ್ಕಿಗೆ ಹಸಿರು ಬಣ್ಣ?

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರುಹಕ್ಕಿ (ಪೆಲಿಕನ್)ಗಳಿಗೆ ಹಸಿರು ಬಣ್ಣ (ಪೇಂಟ್) ಬಳಿದಿರುವ ಬಗ್ಗೆ ವರದಿಯಾಗಿದೆ...

ಬೆಂಗಳೂರು:  ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರುಹಕ್ಕಿ (ಪೆಲಿಕನ್)ಗಳಿಗೆ ಹಸಿರು ಬಣ್ಣ (ಪೇಂಟ್) ಬಳಿದಿರುವ ಬಗ್ಗೆ ವರದಿಯಾಗಿದೆ. 2 ದಿನಗಳ ಹಿಂದೆ ಸಾಮಾಜಿಕ ತಾಣ ಫೇಸ್‌ಬುಕ್‌ನಲ್ಲಿ ಪಕ್ಷಿಶಾಸ್ತ್ರಜ್ಞ ಪ್ರಶಾಂತ್ ಕುಮಾರ್ ಎಂಬವರು ಹಸಿರು ಬಣ್ಣ ಬಳಿದಿರುವ ಪೆಲಿಕನ್‌ಗಳ ಫೋಟೋ ಅಪ್‌ಲೋಡ್ ಮಾಡಿ, ಕ್ರೂರತೆಯನ್ನು ಬಯಲಿಗೆಳೆದಿದ್ದರು.

ಕೆಲವೊಂದು ನೀರುಹಕ್ಕಿಗಳಿಗೆ ಪೂರ್ತಿ ಬಣ್ಣ ಬಳಿದಿದ್ದರೆ, ಇನ್ನು ಕೆಲವು ಹಕ್ಕಿಗಳ ರೆಕ್ಕೆ ಪುಕ್ಕದಲ್ಲಿ ಅಲ್ಲಲ್ಲಿ ಬಣ್ಣಗಳಿವೆಯಂತೆ. ಹೀಗ್ಯಾಕೆ ಎಂದು ಕೇಳಿದರೆ ನಂಬಲಸಾಧ್ಯವಾದ ರೀತಿಯಲ್ಲಿದೆ ಉದ್ಯಾನವನದವರ ಉತ್ತರ. ಬಣ್ಣ ಬಳಿದದ್ದು ಮಾತ್ರವಲ್ಲ, ಸೀಮೆ ಎಣ್ಣೆ ಬಳಸಿ ಆ ಪೇಂಟ್ ತೆಗೆಯಲಾಗುತ್ತಿದೆ.

ಆದಾಗ್ಯೂ, ಬನ್ನೇರುಘಟ್ಟ ಉದ್ಯಾನವನದಲ್ಲಿ ನವೀಕರಣ ಕೆಲಸ ನಡೆಯುತ್ತಿದ್ದು, ಈ ವೇಳೆ ಹಕ್ಕಿಗಳಿಗೂ ಬಣ್ಣ ಬಳಿಯಲಾಯಿತೆ? ಎಂಬ ಪ್ರಶ್ನೆ ಎದ್ದಿದೆ.

ಪೇಂಟ್‌ನಲ್ಲಿ ಸೀಸ ಇರುವ ಕಾರಣ ಅದು ಪಕ್ಷಿಗಳಿಗೆ ಹಾನಿಕಾರಕ. ಅದು ಮಾತ್ರವಲ್ಲದೆ ಸೀಮೆಎಣ್ಣೆಯಿಂದಾಗಿ ಅವುಗಳ ದೇಹದಲ್ಲಿ ಉರಿ ಉಂಟಾಗಿ ಅಸಾಧ್ಯ ನೋವು ಅನುಭವಿಸುತ್ತವೆ ಅಂತಾರೆ ವೈದ್ಯರು. 

ಪ್ರಾಣಿ- ಪಕ್ಷಿ ಸಂರಕ್ಷಣಾಲಯದಲ್ಲಿ ಪಕ್ಷಿಗಳಿಗೆ ಪೇಂಟ್ ಬಳಿದು ಕ್ರೂರತೆ ಮೆರೆದಿರುವುದು ಯಾಕಾಗಿ? ಈ ಪೆಲಿಕನ್‌ಗಳಿಗೆ ಬಣ್ಣ ಬಳಿದಿರುವುದರ ಹಿಂದಿರುವ ಉದ್ದೇಶ ಏನು? ಬನ್ನೇರುಘಟ್ಟ ಉದ್ಯಾನವನದವರು ಉತ್ತರಿಸಬೇಕಾಗಿದೆ.




Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ರಕ್ಷಾ ಬಂಧನದ ಇತಿಹಾಸ ಏನು? ಸಹೋದರರಿಗೆ ರಾಖಿ ಕಟ್ಟುವುದರ ಮಹತ್ವ ತಿಳಿದುಕೊಳ್ಳಿ!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು