ಐಬಿಪಿಎಸ್ ಸಂದರ್ಶನ ವಿಭಾಗದಲ್ಲಿ ಅವ್ಯವಹಾರ ನಡೆದಿದೆ ಎಂದು ಪತ್ರಿಕಾಗೋಷ್ಠಿ ನಡೆಸಿದ ನೊಂದ ಅಭ್ಯರ್ಥಿ ಧನರಾಜು, ವಿರೇಶ್ 
ಜಿಲ್ಲಾ ಸುದ್ದಿ

ಐಬಿಪಿಎಸ್ ಆಯ್ಕೆಯಲ್ಲಿ ಕನ್ನಡಿಗರಿಗೆ ಅನ್ಯಾಯ

ಸರಕಾರಿ ಬ್ಯಾಂಕ್‌ಗಳಿಗೆ ಉದ್ಯೋಗಿಗಳನ್ನು ನೇಮಕ ಮಾಡುವ ಸಂಸ್ಥೆಯಾದ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್ ...

ಬೆಂಗಳೂರು: ಸರಕಾರಿ ಬ್ಯಾಂಕ್‌ಗಳಿಗೆ ಉದ್ಯೋಗಿಗಳನ್ನು ನೇಮಕ ಮಾಡುವ ಸಂಸ್ಥೆಯಾದ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್ (ಐಬಿಪಿಎಸ್) ಸಮಿತಿ ರಾಜ್ಯದ ಅಭ್ಯರ್ಥಿಗಳನ್ನು ಕಡೆಗಣಿಸಿದೆ.

ಐಬಿಪಿಎಸ್ ಸಂದರ್ಶನ ವಿಭಾಗದಲ್ಲಿ ಲಾಭಿ ನಡೆದಿದೆ. ಲಿಖಿತ ಪರೀಕ್ಷೆ ಹೊರ ರಾಜ್ಯದ ಅಭ್ಯರ್ಥಿಗಳಿಗಿಂತ ಹೆಚ್ಚು ಅಂಕವನ್ನು ನಾವು ಪಡೆದಿದ್ದರೂ, ಸಂದರ್ಶನದಲ್ಲಿ ನಮಗೆ ಉದ್ದೇಶಕ ಪೂರ್ವಕವಾಗಿ ಕಡಿಮೆ ಅಂಕಗಳನ್ನು ನೀಡಿ ಐಬಿಪಿಎಸ್ ಸಂದರ್ಶನ ವಿಭಾಗ ಅಕ್ರಮವೆಸಗಿದೆ ಎಂದು ನೊಂದ ಅಭ್ಯರ್ಥಿ ಧನರಾಜು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಡಿಸೆಂಬರ್ 2014 ರಲ್ಲಿ ಕ್ಲರಿಕಲ್ 1990 ಹುದ್ದೆಗಳಿಗಾಗಿ ಐಬಿಪಿಎಸ್ ಪರೀಕ್ಷೆ ನಡೆಸಲಾಗಿತ್ತು. ಇದರಲ್ಲಿ 1200ಕ್ಕಿಂತ ಹೆಚ್ಚು ಆಂಧ್ರಪ್ರದೇಶ ಹಾಗೂ ತೆಲಂಗಾಣದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ರಾಜ್ಯದ ಅಭ್ಯರ್ಥಿಗಳನ್ನು ಕಡೆಗಣಿಸಲಾಗಿದೆ. ಆಂಧ್ರ ಪ್ರದೇಶ ಮತ್ತು ತೆಲಂಗಾಣದ ಅಭ್ಯರ್ಥಿಗಳು ನಮಗಿಂತಲೂ ಸಾಕಷ್ಟು ಅಂಕಗಳ ಅಂತರ ಹೊಂದಿದ್ದಾರೆ. ಆದರೆ, ಸಂದರ್ಶನ ವೇಳೆ ಹಣಕಾಸು ಲಾಭಿ ನಡೆಸಿ ಅವರಿಗೆ ಹೆಚ್ಚು ಅಂಕಗಳನ್ನು ನೀಡಿ, ನಮ್ಮ ಕಡೆಗಣಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂದರ್ಶನ ಸಮಯದಲ್ಲಿ ಕರ್ನಾಟಕದ ಅಭ್ಯರ್ಥಿಗಳಿಗೆ ಕಡಿಮೆ ಅಂಕ ನೀಡಿರುವುದಲ್ಲದೇ, ಇನ್ನೂ ಕೆಲವು ಅಭ್ಯರ್ಥಿಗಳನ್ನು ಅನರ್ಹಗೊಳಿಸಿದೆ. ಇದರಿಂದ ನಮ್ಮ ರಾಜ್ಯದ ಅಭ್ಯರ್ಥಿಗಳಿಗೆ ಅನ್ಯಾಯಾವಾಗುತ್ತಿದೆ. ಕೂಡಲೇ ಈ ಕುರಿತು ಕ್ರಮ ಸರ್ಕಾರ ತನಿಖೆ ನಡೆಸಬೇಕೆಂದು ಒತ್ತಾಯಿಸುತ್ತೇವೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

Techie Kidnap case: Lakshmi Menonಗೆ ಬಿಗ್ ರಿಲೀಫ್, ನಿರೀಕ್ಷಣಾ ಜಾಮೀನು ಮಂಜೂರು, ಏನಿದು ಪ್ರಕರಣ? ನಟಿ ಹೇಳಿದ್ದೇನು?

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

SCROLL FOR NEXT