ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ 
ಜಿಲ್ಲಾ ಸುದ್ದಿ

ಸರ್ಕಾರಿ ಯೋಜನೆ ಹಣ ಬಿಬಿಎಂಪಿಗೆ ಬಳಸಬೇಡಿ: ಟಿ.ಎಂ. ವಿಜಯಭಾಸ್ಕರ್

ರಸ್ತೆ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಯೋಜನೆಗಳ ಅನುದಾನವನ್ನು ಇತರೆ ಯೋಜನೆಗಳಿಗಾಗಿ ಬಳಸಬಾರದು ಎಂದು ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ...

ಬೆಂಗಳೂರು: ರಸ್ತೆ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಯೋಜನೆಗಳ ಅನುದಾನವನ್ನು ಇತರೆ ಯೋಜನೆಗಳಿಗಾಗಿ ಬಳಸಬಾರದು ಎಂದು ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ರಸ್ತೆ ಮೂಲಸೌಕರ್ಯ ವಿಭಾಗದ ಎಂಜಿನಿಯರ್‍ಗಳೊಂದಿಗೆ ಸಭೆ ನಡೆಸಿದ ಅವರು, ಬಿಬಿಎಂಪಿ ಯೋಜನೆ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ನಡುವೆ ಅಂತರ ಕಾಪಾಡುವಂತೆ ಸೂಚಿಸಿದ್ದಾರೆ. ರಾಜ್ಯ ಸರ್ಕಾರದ ರಸ್ತೆ ಕಾಮಗಾರಿ ಯೋಜನೆಗಳಿಗೆ ಪ್ರತ್ಯೇಕ ಬಜೆಟ್ ಇರುವುದರಿಂದ ಬಿಬಿಎಂಪಿ ಯೋಜನೆಗಳ ಈ ಹಣವನ್ನು ಬಳಸಬಾರದು. ಈಗ ಹೊಸದಾಗಿ ಬಿಬಿಎಂಪಿಯಲ್ಲಿ ನಡೆಯಲಿರುವ ಕಾಮಗಾರಿಗಳಿಗೆ ಟೆಂಡರ್ ಕರೆದು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು.

ಆರ್ಟಿರಿ ಯಲ್ ಹಾಗೂ ಸಬ್  ಆರ್ಟಿರಿಯಲ್ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಲು ಸೂಚನೆ ನೀಡಿದ್ದು, ಶೀಘ್ರವಾಗಿ ಕಾಮಗಾರಿ ಮುಗಿಸಬೇಕು. ಕಾಮಗಾರಿ ಪ್ರಗತಿಯಲ್ಲಿರುವ ಸ್ಥಳಗಲ್ಲಿ ಯೋಜನೆಯ ಹೆಸರು, ಜಲಮಂಡಳಿ ಅಧಿಕಾರಿಗಳ ಜೊತೆ ಮಾತುಕತೆ ಕೆಲವು ಮುಖ್ಯರಸ್ತೆಗಳಲ್ಲಿ ಪೈಪ್‍ಲೈನ್ ಅಳವಡಿಸಲು ಜಲಮಂಡಳಿ ಅಧಿಕಾರಿಗಳು ರಸ್ತೆ ಅಗೆಯುತ್ತಿದ್ದಾರೆ.

ಕೆಲವೆಡೆ ರಸ್ತೆ ಅಗೆದು, ಮುಚ್ಚದೆ ಹಾಗೆಯೇ ಬಿಡುವುದರಿಂದ ವಾಹನ ದಟ್ಟಣೆ ಹೆಚ್ಚುತ್ತಿದೆ. ಪದೇ ಪದೇ ಗುಂಡಿ ತೋಡುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈ ಬಗ್ಗೆ ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಸಭೆಯಲ್ಲಿದ್ದ ಸಂಚಾರಿ ಪೊಲೀಸ್ ಮುಖ್ಯಸ್ಥರು ಮನವಿ ಮಾಡಿದರು.

ರಸ್ತೆ ಅಗೆಯುವಾಗ ಎಚ್ಚರವಹಿಸು ವಂತೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೈಪ್‍ಲೈನ್ ಅಳವಡಿಸುವಂತೆ ಜಲ ಮಂಡಳಿ ಅಧಿಕಾರಿ ಗಳಿಗೆ ಸೂಚಿಸ ಲಾಗು ವುದು ಎಂದು ಆಡಳಿತಾಧಿಕಾರಿ ವಿಜಯಭಾಸ್ಕರ್ ಸಂಚಾರಿ ಪೊಲೀಸರಿಗೆ ತಿಳಿಸಿದರು.ಆಯುಕ್ತ ಜಿ.ಕುಮಾರ್ ನಾಯಕ್ ಸಭೆಯಲ್ಲಿ ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಉರಿ ಸೆಕ್ಟರ್ ನಲ್ಲಿ ಒಳನುಸುಳುವಿಕೆ ಯತ್ನ, ಪಾಕ್ ಉಗ್ರನ ಹತ್ಯೆ!

ಇರಾನ್ ವಾರ್ ಗೆ ಹೌತಿಗಳು ಸಜ್ಜು! ಮತ್ತೊಂದು ಜಲಸಂಧಿ ಬಂದ್? ಜಾಗತಿಕ ವ್ಯಾಪಾರಕ್ಕೆ ಮತ್ತಷ್ಟು ಹೊಡೆತ!

ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಮೂವರು ಸಬ್ ಇನ್‌ಸ್ಪೆಕ್ಟರ್‌ ಸಾವು; ಇಬ್ಬರಿಗೆ ಗಂಭೀರ ಗಾಯ

ಕೃಷ್ಣಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಅನುದಾನ: ಅಭಿವೃದ್ಧಿಗೆ ಹಣವಿಲ್ಲವೆಂಬ BJP ಆರೋಪ ಸತ್ಯಕ್ಕೆ ದೂರ; ಸಿಎಂ ಸಿದ್ದರಾಮಯ್ಯ

ಚು. ಆಯೋಗದಿಂದ ಇಂದು ಸಂಜೆ ಮಹತ್ವದ ಸುದ್ದಿಗೋಷ್ಠಿ: 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

SCROLL FOR NEXT