ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಗುಲಾಮಗಿರಿಯಿಂದ ಹೊರಬಾರದ ಹಳ್ಳಿಗಳು ಶಾಸಕ ಕೆ.ಎಸ್.ಪುಟ್ಟಣಯ್ಯ ವಿಷಾದ

ದೇಶಕ್ಕೆ ಸ್ವಾತಂತ್ರ ಬಂದು ಆರು ದಶಕಗಳು ಕಳೆದಿದ್ದರೂ ಹಳ್ಳಿಗಳು ಗುಲಾಮ ವ್ಯವಸ್ಥೆಯಿಂದ ಹೊರಬಂದಿಲ್ಲ ಎಂದು ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಬೇಸರ ವ್ಯಕ್ತಪಡಿಸಿದರು...

ಬೆಂಗಳೂರು: ದೇಶಕ್ಕೆ ಸ್ವಾತಂತ್ರ ಬಂದು ಆರು ದಶಕಗಳು ಕಳೆದಿದ್ದರೂ ಹಳ್ಳಿಗಳು ಗುಲಾಮ ವ್ಯವಸ್ಥೆಯಿಂದ ಹೊರಬಂದಿಲ್ಲ ಎಂದು ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಬೇಸರ ವ್ಯಕ್ತಪಡಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಹಳ್ಳಿಗಳಲ್ಲಿ ಇಂದಿಗೂ ಪ್ರಜಾಪ್ರಭುತ್ವ ವ್ಯವಸ್ಥೆಯಿಲ್ಲ. ಅಲ್ಲಿ ಪ್ರತಿಷ್ಠಿತ ವ್ಯಕ್ತಿಗಳು ಜಾರಿ ಮಾಡುವ ತೀರ್ಮಾನಗಳೇ ಅಂತಿಮವಾಗಲಿವೆ. ಹೀಗಾಗಿ ಗ್ರಾಮದ ಕಟ್ಟ ಕಡೆಯ ವ್ಯಕ್ತಿ ಸೌಲಭ್ಯಗಳಿಂದ ವಂಚಿತನಾಗಿದ್ದಾನೆ' ಎಂದು ಹೇಳಿದರು. ಇನ್ನೂ ರಾಜ್ಯದ ಅನೇಕ ಹಳ್ಳಿಗಳ ರಸ್ತೆಗಳು ಡಾಂಬರೀಕರಣಗೊಂಡಿಲ್ಲ. ಗ್ರಾಮಗಳಿಗೆ ಬೇಕಿರುವ ಮೂಲ ಸೌಕರ್ಯಗಳು ದೊರೆತಿಲ್ಲ. ಸಾಮಾನ್ಯ ಕೆಲಸಕ್ಕೂ ವಿಧಾನಸೌಧದ ಮೆಟ್ಟಲೇರಬೇಕಿದೆ. ಇದನ್ನು ಸರಿಪಡಿಸಬೇಕಾದರೆ ಪಂಚಾಯತಿ ಮಟ್ಟದಲ್ಲಿ ಬದಲಾವಣೆಯಾಗಬೇಕೆಂದು ಅಭಿಪ್ರಾಯಪಟ್ಟರು.

ಮಾಜಿ ಶಾಸಕ ಜಿ.ವಿ. ಶ್ರೀರಾಮರೆಡ್ಡಿ ಮಾತನಾಡಿ, `ಅಧಿಕಾರವನ್ನು ವಿಕೇಂದ್ರಿಕರಣಗೊಳಿಸುವ ಮೂಲಕ ಗ್ರಾಮದಲ್ಲಿ ವಾಸಿಸುವ ವ್ಯಕಿಯೂ ಅಧಿಕಾರ ಚಲಾಯಿಸುವಂತಾಗಬೇಕು. ಗ್ರಾಮದ ಸಮಸ್ಯೆಗಳನ್ನು ಗ್ರಾಮಸ್ಥರೇ ಬಗೆಹರಿಸಿಕೊಳ್ಳಬೇಕೆಂದು ಗ್ರಾಮ ಪಂಚಾಯತಿ ವ್ಯವಸ್ಥೆ ತರಲಾಯಿತು. ಆದರೆ, ಗ್ರಾಪಂ ಪಟ್ಟಭದ್ರ ಹಿತಾಸಕ್ತಿಗಳ ಕೈಯಲ್ಲಿ ಅಡಗಿದೆ' ಎಂದು ಆರೋಪಿಸಿದರು.

ಗ್ರಾಪಂ ವ್ಯವಸ್ಥೆಗೆ ಶಕ್ತಿ ತುಂಬಬೇಕಾಗಿದೆ. ಆದ್ದರಿಂದ ಈಗಿರುವ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ ತಂದು ಮಾದರಿ ಗ್ರಾಮ ಪಂಚಾಯಿತಿ ವ್ಯವಸ್ಥೆಯಾಗಿ ಬದಲಾಯಿಸಬೇಕಾದ ಅಗತ್ಯದೆ. ಈ ನಿಟ್ಟಿನಲ್ಲಿ ಕಮ್ಯೂನಿಸ್ಟ್ ಪಕ್ಷ ಹಾಗೂ ದಲಿತ ಸಂಘಟನೆಗಳು ಜನತೆಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿವೆ ಎಂದು ಅವರು ತಿಳಿಸಿದರು. ಸಿಪಿಎಂ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಎನ್.ನಾಗರಾಜು, ಹಸಿರು ಸೇನೆಯ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ, ಎಸ್ ಯುಸಿಐನ ಎಂ.ಎಸ್.ಪ್ರಕಾಶ್, ದಸಂಸ ರಾಜ್ಯಾಧ್ಯಕ್ಷ ಮಾವಳ್ಳಿ ಶಂಕರ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT