ಪಾಟೀಲ ಪುಟ್ಟಪ್ಪ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಹೀರೋ ಆಗಲು ಹೊರಟ ಶಾಸಕ ನಡಹಳ್ಳಿ: ಪಾಪು ತರಾಟೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಧ್ವನಿ ಎತ್ತುತ್ತಿರುವ ದೇವರಹಿಪ್ಪರಗಿಯ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ ಏಕಾಏಕಿ ಹೀರೋ ಆಗಲು ಹೊರಟಿದ್ದಾರೆಂದು ನಾಡೋಜ...

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಧ್ವನಿ ಎತ್ತುತ್ತಿರುವ ದೇವರಹಿಪ್ಪರಗಿಯ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ ಏಕಾಏಕಿ ಹೀರೋ ಆಗಲು ಹೊರಟಿದ್ದಾರೆಂದು ನಾಡೋಜ ಡಾ. ಪಾಟೀಲ ಪುಟ್ಟಪ್ಪ ಹರಿಹಾಯ್ದಿದ್ದಾರೆ.

ಪತ್ರಿಕಾ ಪ್ರಕಟಣೆ ಮೂಲಕ ತಮ್ಮ ಸಿಟ್ಟು ಹೊರ ಹಾಕಿರುವ ಪಾಪು, ನಡಹಳ್ಳಿ ಶಾಸಕರಾಗುವ ಮೊದಲು ಏನಿದ್ದರು ಎಂಬುದನ್ನು ಅರಿಯಲಿ. ಉತ್ತರ ಕರ್ನಾಟಕವನ್ನು ಸಿಎಂ ಸಿದ್ದರಾಮಯ್ಯ ನಿರ್ಲಕ್ಷಿಸಿರುವರೆಂದು ಬಹುದೊಡ್ದ ರಾಗ ತೆಗೆದು ಹೇಳುತ್ತಾ ರಾಜಕೀಯ ರಂಗಸ್ಥಳದ ಮೇಲೆ ಕಾಣಿಸಿಕೊಳ್ಳಬೇಕೆಂದು ಹೊರಟಿದ್ದಾರೆ. ಈಗ ಎತ್ತಿರುವ ಉತ್ತರ ಕರ್ನಾಟಕವು ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎನ್ನುವ ಮಾತನ್ನು ಶಾಸಕ ಸಭೆಯಲ್ಲಿ ಎಂದೂ ಎತ್ತಲಿಲ್ಲ. ಅವರ ಬಾಯಲ್ಲಿ ಆಗಾಗ ಪ್ರತ್ಯೇಕ ರಾಜ್ಯದ ಧ್ವನಿಯು ಕೇಳಿ ಬರುತ್ತಿದೆ. ರಾಜ್ಯವನ್ನು ಒಡೆಯುವುದಕ್ಕೆ ಬಹುದೊಡ್ಡ ಶಕ್ತಿ ಬೇಕಾಗಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT