ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಸ್ಟೀಲ್ ಸೇತುವೆ ಯೋಜನೆಗೆ ಶೀಘ್ರ ಚಾಲನೆ

ಬಹುವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸ್ಟೀಲ್ ಸೇತುವೆ ಯೋಜನೆಗಳಿಗೆ ಸದ್ಯದಲ್ಲೇ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ...

ಬೆಂಗಳೂರು: ಬಹುವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸ್ಟೀಲ್ ಸೇತುವೆ ಯೋಜನೆಗಳಿಗೆ ಸದ್ಯದಲ್ಲೇ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಸ್ಟೀಲ್ ಸೇತುವೆ ನಿರ್ಮಿಸುವುದಾಗಿ ಬಿಬಿಎಂಪಿ ಆಡಳಿತ ಬಹಳ ಹಿಂದಿನಿಂದಲೂ ಹೇಳಿಕೊಂಡು ಬರುತ್ತಿತ್ತು. ಆದರೆ, ಹಣಕಾಸಿನ ತೊಂದರೆಯಿಂದ ಸಾಧ್ಯವಾಗಿರಲಿಲ್ಲ. ಹೀಗಾಗಿ ಸರ್ಕಾರ ಬಿಬಿಎಂಪಿಗೆ ನೀಡುತ್ತಿರುವ ಅನುದಾನ ಬಳಸಿಕೊಂಡು ಬಾಕಿ ಇರುವ ಅನೇಕ ಯೋಜನೆಗಳ ಜತೆ ಸ್ಟೀಲ್ ಸೇತುವೆಗಳ ನಿರ್ಮಾಣವನ್ನೂ ಆರಂಭಿಸಲಾಗುತ್ತಿದೆ ಎಂದು ಅವರು ಸೋಮವಾರ ಸುದ್ದಿಗಾರರಿಗೆ ಹೇಳಿದರು.

ನಗರದ ಮಿನರ್ವ ವೃತ್ತದಿಂದ ಹಡ್ಸನ್ ವೃತ್ತದವರೆಗೂ 3 ಕಿಮೀ ಉದ್ದದ ಸ್ಟೀಲ್ ಸೇತುವೆಯನ್ನು ಸುಮಾರು ರು.139 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಅದೇ ರೀತಿ ಶಿವಾನಂದ ಸರ್ಕಲ್‍ಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ 700 ಮೀಟರ್ ಉದ್ದದ ಸ್ಟೀಲ್ ಸೇತುವೆ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ರು.57 ಕೋಟಿ ವೆಚ್ಚ ಮಾಡಲು ನಿರ್ಧರಿಸಲಾಗಿದೆ. ಇದಲ್ಲದೆ ಕೋರಮಂಗಲ ಈಜಿಪುರದಲ್ಲಿ ಕೇಂದ್ರಿಯ ವಿದ್ಯಾಲಯ ಬಳಿ 2.4 ಕಿಮೀ ಉದ್ದದ ಕಾಂಕ್ರೀಟ್ ಮೇಲು ಸೇತುವೆ ನಿರ್ಮಿಸಲಾಗುತ್ತಿದ್ದು, ಇದಕ್ಕೆಂದು ರು.214ಕೋಟಿ ವೆಚ್ಚ ಮಾಡಲಾಗುತ್ತಿದೆ. ಈ ಎಲ್ಲಾ ಯೋಜನೆಗಳನ್ನು ಬಜೆಟ್‍ನಲ್ಲಿ ಅಳವಡಿಸಲಾಗುತ್ತಿದ್ದು, ಸದ್ಯದಲ್ಲೇ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ರಾಮಲಿಂಗಾ ರೆಡ್ಡಿ ವಿವರಿಸಿದರು.
 
ರು.2500 ಕೋಟಿ ಕಾಮಗಾರಿಗೆ ಚಾಲನೆ

ಬಿಬಿಎಂಪಿ ಮೂಲಕ ರಾಜ್ಯ ಸರ್ಕಾರ ವೆಚ್ಚ ಮಾಡಲು ನಿಗದಿಪಡಿಸಿರುವ ರು.2500 ಕೋಟಿಗಳಲ್ಲಿ ನಾನಾ ಕಾಮಗಾರಿ ಕೈಗೊಳ್ಳಲು ಸಿದಟಛಿತೆ ನಡೆಸಲಾಗಿದೆ. 2014-15ರ ಅವಧಿಯ ರು.1000 ಕೋಟಿ ಹಾಗೂ 2015-16ರ ಸಾಲಿನ ರು.1500 ಕೋಟಿಯನ್ನು ಸರ್ಕಾರ 13ನೇ ಹಣಕಾಸು ಆಯೋಗ, ನರ್ಮ್ ಹಾಗೂ ನಗರೋತ್ಥಾನ ಯೋಜನೆಗಳ ಮೂಲಕ ಬಿಬಿಎಂಪಿಗೆ ನೀಡುತ್ತಿದೆ. ಈ ಅನುದಾನದಲ್ಲಿ ಬಾಕಿ ಉಳಿದಿದ್ದ ಕಾಮಗಾರಿಗಳು ಹಾಗೂ ಹೊಸ ಕಾಮಗಾರಿಗಳನ್ನು ಸೇರಿಸಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ರಾಮಲಿಂಗಾ ರೆಡ್ಡಿ ವಿವರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT