ಡೆಂಘೀ ಜ್ವರ 
ಜಿಲ್ಲಾ ಸುದ್ದಿ

ಮತ್ತೆ ಡೆಂಘೀ ಕಾಟ ಶುರು

ಮಾರಕ ಡೆಂಘೀ ರೋಗ ಈ ಬಾರಿ ಮುಂಗಾರು ಮಳೆಗೂ ಮುನ್ನವೇ ರಾಜ್ಯದಲ್ಲಿ ಮತ್ತೆ 365 ಮಂದಿಯನ್ನು ಬಾಧಿಸತೊಡಗಿದೆ...

ಬೆಂಗಳೂರು: ಮಾರಕ ಡೆಂಘೀ ರೋಗ ಈ ಬಾರಿ ಮುಂಗಾರು ಮಳೆಗೂ ಮುನ್ನವೇ ರಾಜ್ಯದಲ್ಲಿ ಮತ್ತೆ 365 ಮಂದಿಯನ್ನು ಬಾಧಿಸತೊಡಗಿದೆ.

ಪ್ರತಿ ಬಾರಿ ಜೂನ್ ನಂತರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಡೆಂಘೀ ಈ ವರ್ಷ ಮುಂಗಾರು ಪೂರ್ವ ಮಳೆ ಪರಿಣಾಮ ಎಲ್ಲೆಡೆ ವ್ಯಾಪಿಸತೊಡಗಿದೆ. ಕಳೆದ ವರ್ಷ ಇಬ್ಬರನ್ನು ಬಲಿ ತೆಗೆದುಕೊಂಡಿದ್ದ ಡೆಂಘೀ ಸುಮಾರು 300ಕ್ಕೂ ಹೆಚ್ಚು ಜನರನ್ನು ಕಾಡಿತ್ತು. ಆದರೆ, ಈ ವರ್ಷ ಕೇವಲ 5ತಿಂಗಳಲ್ಲಿ ಒಟ್ಟು 3635 ಮಂದಿಗೆ ಡೆಂಘೀ ಇರುವ ಬಗ್ಗೆ ಶಂಕಿಸಲಾಗಿತ್ತು. ಅವರಲ್ಲಿ 365ಮಂದಿಗೆ ರೋಗ ಇರುವುದು ಪತ್ತೆಯಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ತೀವ್ರಗತಿಯಲ್ಲೇ ವ್ಯಾಪಿಸುತ್ತಿರುವ ಡೆಂಘೀ ಸುಮಾರು 62ಜನರನ್ನು ಬಾಧಿಸುತಿದೆ. ಅದೇ ರೀತಿ ಬಳ್ಳಾರಿಯಲ್ಲಿ 69 ಮಂದಿಗೆ ನರಳುತ್ತಿದ್ದು, ರಾಯಚೂರಿನಲ್ಲಿ 47 ಜನರಿಗೆ ರೋಗ ಇರುವುದು ದೃಢವಾಗಿದೆ. ಇದಲ್ಲದೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿಯೂ ಡೆಂಘೀ ಇರುವುದು ಗೊತ್ತಾಗಿದೆ. ಆದರೆ ರೋಗ ಪತ್ತೆ ಪರೀಕ್ಷೆಯಲ್ಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳ ನಡುವೆ ಗೊಂದಲ ಇರುವುದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಬಗ್ಗೆ ಸರ್ಕಾರಕ್ಕೆ ಸರಿಯಾದ ಮಾಹಿತಿ ಲಭ್ಯವಾಗುತ್ತಿಲ್ಲ.

ಡೆಂಘೀ ಪತ್ತೆ ಹಚ್ಚಲು ಖಾಸಗಿ ಆಸ್ಪತ್ರೆಗಳು ರ್ಯಾಪಿಡ್ ಟೆಸ್ಟ್ ಕಿಟ್‍ಗಳನ್ನು ಬಳಸುತ್ತವೆ. ಈ ವಿಧಾನದಲ್ಲಿ ರೋಗ ಪತ್ತೆ ಶೀಘ್ರ ಹಾಗೂ ಕಡಿಮೆ ದರ ಕೂಡ. ಆದ್ದರಿಂದ ಹೆಚ್ಚಿನ ಖಾಸಗಿ
ಆಸ್ಪತ್ರೆಗಳು ಇದನ್ನೇ ಬಳಸಿ ರೋಗ ಪತ್ತೆ ಮಾಡುತ್ತವೆ. ಹಾಗೆಯೇ ತಕ್ಷಣ ಚಿಕಿತ್ಸೆಯನ್ನೂ ಆರಂಭಿಸುತ್ತವೆ. ಆದರೆ ಸರ್ಕಾರ ಆಸ್ಪತ್ರೆಗಳು ಎಲಿಸಾ ಆಧರಿತ ಐಜಿಎಂ ಪರೀಕ್ಷೆಯಲ್ಲಿ
ಡೆಂಘೀ ಎಂದು ದೃಢವಾಗದ ಹೊರತು ರೋಗಿಗೆ ಡೆಂಘೀ ಇರುವುದನ್ನು ಒಪ್ಪಿಕೊಳ್ಳುವುದಿಲ್ಲ. ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಪತ್ತೆಯಾಗುವ ಡೆಂಘೀ ಪೀಡಿತರ ಸೂಕ್ತ ಮಾಹಿತಿ ನಿಖರವಾಗಿ ಸಿಗುತ್ತಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT