ಎಸ್‍ಎಸ್‍ಎಲ್‍ಸಿ ಫಲಿತಾಂಶ ನೋಡಿದಮೇಲೆ ಖುಷಿಯ ಕ್ಷಣಗಳು 
ಜಿಲ್ಲಾ ಸುದ್ದಿ

ಪೇಟೆಯವ್ರಿಗಿಂತ ಬೆಸ್ಟ್ ಹಳ್ಳಿ ಮಕ್ಳು, ನಾವೇ ಫಸ್ಟ್ ಅಂದ್ರು ಹುಡ್ಗೀರು

ಎಸ್‍ಎಸ್‍ಎಲ್‍ಸಿ ಫಲಿತಾಂಶ ಈ ಬಾರಿ ಶೇ.81.82ಕ್ಕೆ ಏರಿದ್ದು, ವಿದ್ಯಾರ್ಥಿನಿಯರು ಹಾಗೂ ಗ್ರಾಮೀಣ ಪರೀಕ್ಷಾರ್ಥಿಗಳು ಉತ್ತಮ ಸಾಧನೆ...

ಪ್ರೌಢ ಶಿಕ್ಷಣ ಇಲಾಖೆ ಇತಿಹಾಸದಲ್ಲೇ ಗರಿಷ್ಠ ಫಲಿತಾಂಶ, ಉಡುಪಿಗೆ ಮೊದಲ ಸ್ಥಾನ, ಗದಗಕ್ಕೆ ಕಡೇ ಸ್ಥಾನ, 36 ಶಾಲೆಗಳಲ್ಲಿ ಶೂನ್ಯ

ಬೆಂಗಳೂರು: ಎಸ್‍ಎಸ್‍ಎಲ್‍ಸಿ ಫಲಿತಾಂಶ ಈ ಬಾರಿ ಶೇ.81.82ಕ್ಕೆ ಏರಿದ್ದು, ವಿದ್ಯಾರ್ಥಿನಿಯರು ಹಾಗೂ ಗ್ರಾಮೀಣ ಪರೀಕ್ಷಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಶ್ರೇಣೀಕೃತ ವ್ಯವಸ್ಥೆಯಲ್ಲಿ ನಡೆದ ಮೊದಲ ಪರೀಕ್ಷೆ ಇದಾಗಿದ್ದು, ಫಲಿತಾಂಶದಲ್ಲಿ ಕಳೆದ ಶೈಕ್ಷಣಿಕ ವರ್ಷಕ್ಕಿಂತ ಶೇ.0.63ರಷ್ಟು ಏರಿಕೆಯಾಗಿದೆ. ಶಿರಸಿಯ ವಿಶ್ವಜೀತ್ ಹೆಗಡೆ 623 ಅಂಕ ಪಡೆದು ರಾಜ್ಯಕ್ಕೇ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಐವರು ವಿದ್ಯಾರ್ಥಿಗಳು 622 ಹಾಗೂ 15 ವಿದ್ಯಾರ್ಥಿಗಳು 621 ಅಂಕ ಪಡೆದು ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನ ಗಳಿಸಿಕೊಂಡಿದ್ದಾರೆ.
ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ, ಚಿಕ್ಕೋಡಿ ಹಾಗೂ ಉತ್ತರ ಕನ್ನಡ ಮೊದಲ ಮೂರು ಸ್ಥಾನ ಪಡೆದರೆ, ಗದಗ, ಕೊಪ್ಪಳ ಹಾಗೂ ಕಲಬುರಗಿ ಕೊನೆಯ ಮೂರು ಸ್ಥಾನ ಗಳಿಸಿವೆ.
ಹಾಗೆಯೇ 2485 ಶಾಲೆಗಳು ಶೇ.100ರಷ್ಟು ಫಲಿತಾಂಶ ಸಾಧಿಸಿದ್ದರೆ, 36 ಶಾಲೆಗಳು ಶೂನ್ಯ ಫಲಿತಾಂಶ ಮಾಡಿವೆ. ಫಲಿತಾಂಶವಾರುಲೆಕ್ಕಾಚಾರದಲ್ಲಿ ಖಾಸಗಿ ಶಾಲೆಗಳು ಮುಂದಿದ್ದು,
ಸರ್ಕಾರಿ ಶಾಲೆಗಳು ಕೊಂಚ ಎಡವಿವೆ. ಆದರೆ ಶೇ.100ರಷ್ಟು ಫಲಿತಾಂಶದಲ್ಲಿ ಸರ್ಕಾರಿ ಶಾಲೆಗಳ ಪಟ್ಟಿ ಹೆಚ್ಚಿದೆ. ವಿಶೇಷವೆಂದರೆ ಯಾವ ಸರ್ಕಾರಿ ಶಾಲೆಯೂ ಶೂನ್ಯ ಫಲಿತಾಂಶ ಮಾಡಿಲ್ಲ.

ಶಿಕ್ಷಕರು, -ಪಾಲಕರ ಸಹಾಯದಿಂದ ರಾಜ್ಯಕ್ಕೆ ಮೊದಲಿಗನಾಗಿದ್ದೇನೆ ಎಂದು ಹೇಳಿಕೊಳ್ಳಲು ಖುಷಿಯಾಗುತ್ತದೆ. ಸದ್ಯಕ್ಕೆ ಪಿಯುಸಿಯಲ್ಲಿ ವಿಜ್ಞಾನ ವಿಭಾಗಕ್ಕೆ ಪ್ರವೇಶ ಪಡೆದು ಐಐಟಿಯಲ್ಲಿ ತಾಂತ್ರಿಕ ಶಿಕ್ಷಣ ಪಡೆಯುವ ಕನಸು ಹೊಂದಿದ್ದೇನೆ. ಹೆಚ್ಚು ಅಂಕ ಪಡೆಯಲು ಪುಸ್ತಕದ ಹುಳು ಆಗಬೇಕಿಲ್ಲ, ನಾನು ಡಿಸೆಂಬರ್‍ನಿಂದ ಮರು ಪಠಣ ಆರಂಭಿಸಿದ್ದೆ, ಇದರಿಂದ ಹೆಚ್ಚು ಅಂಕ ಪಡೆಯಲು ನೆರವಾಯಿತು.
-ವಿಶ್ವಜೀತ್ ಹೆಗಡೆ



ಜಿಲ್ಲಾವಾರು

ಮೊದಲ ಸ್ಥಾನ ಉಡುಪಿ
ದ್ವಿತೀಯ ಸ್ಥಾನ ಚಿಕ್ಕೋಡಿ
ತೃತೀಯ ಸ್ಥಾನ ಉತ್ತರ ಕನ್ನಡ
ಕಡೇ ಸ್ಥಾನ ಗದಗ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Modi ma*****ch**: ರಾಹುಲ್ ಗಾಂಧಿ Voter Adhikar Yatra ವೇದಿಕೆಯಲ್ಲಿ ಅಶ್ಲೀಲ ನಿಂದನೆ, BJP ಕೆಂಡಾಮಂಡಲ!

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

SCROLL FOR NEXT