ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮಳೆಗಾಲ ಎದುರಿಸಲು ಬಿಬಿಎಂಪಿ ಸಿದ್ಧತೆ

ಮಳೆಗಾಲಕ್ಕೆ ಸಿದ್ದತೆ ನಡೆಸಿರುವ ಬಿಬಿಎಂಪಿ, ಗ್ಯಾಂಗ್ ಮನ್‍ಗಳ ತಂಡ ಹಾಗೂ ನಿಯಂತ್ರಣ ಕೊಠಡಿಗಳನ್ನು ಸಜ್ಜುಗೊಳಿಸುತ್ತಿದೆ...

ಬೆಂಗಳೂರು: ಮಳೆಗಾಲಕ್ಕೆ ಸಿದ್ದತೆ ನಡೆಸಿರುವ ಬಿಬಿಎಂಪಿ, ಗ್ಯಾಂಗ್ ಮನ್‍ಗಳ ತಂಡ ಹಾಗೂ ನಿಯಂತ್ರಣ ಕೊಠಡಿಗಳನ್ನು ಸಜ್ಜುಗೊಳಿಸುತ್ತಿದೆ.

ಮಳೆಗಾಲದಲ್ಲಾಗುವ ಅನಾಹುತಗಳಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಎಲ್ಲ ವಲಯಗಳಿಗೆ ಸೂಚನೆ ನೀಡಿರುವ ಆಯುಕ್ತ ಜಿ. ಕುಮಾರ್ ನಾಯಕ್, ಅರಣ್ಯ ವಿಭಾಗದ ಸಿಬ್ಬಂದಿ ನಿಯಂತ್ರಣ ಕೊಠಡಿಯ ಪ್ರಹರಿ ವಾಹನ ಹಾಗೂ ಸಲಕರಣೆಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಪ್ರತಿ ಬಾರಿಯ ಮಳೆಗಾಲದಲ್ಲಿ ಮರಗಳು ಉರುಳುವುದು, ರಸ್ತೆಗಳಲ್ಲಿ ನೀರು ನಿಲ್ಲುವುದು, ಮನೆಗಳಿಗೆ ನೀರು ನುಗ್ಗುವುದು ಸೇರಿದಂತೆ ಹಲವು ಸಮಸ್ಯೆಗಳು ಸೃಷ್ಟಿಯಾಗುತ್ತಿವೆ. ಎಲ್ಲ ಸಿಬ್ಬಂದಿ ಪರಿಹಾರ ಕಾರ್ಯಕ್ಕೆ ಸಿದ್ಧವಾಗಿರಬೇಕು ಎಂದು ಸೂಚಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ದಿನ 24 ಗಂಟೆ ಕಾರ್ಯನಿರ್ವಹಿಸುವ 10 ನಿಯಂತ್ರಣ ಕೊಠಡಿಗಳಿದ್ದು, ಸಾರ್ವಜನಿಕರಿಂದ ಸ್ವೀಕರಿಸಿದ ದೂರುಗಳನ್ನು ವೈರ್‍ಲೆಸ್ ಮೂಲಕ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಬೇಕು. 13 ಪ್ರಹರಿ ವಾಹನ ಹಾಗೂ 130 ಗ್ಯಾಂಗ್‍ಮನ್ ಗಳಿದ್ದು, ಸದಾ ಸಜ್ಜಾಗಿರಬೇಕು. ಅರಣ್ಯ ಘಟಕದಲ್ಲಿ ಮರ ಕಡಿಯುವ 13 ತಂಡಗಳಿದ್ದು, ಪ್ರತಿ ತಂಡದಲ್ಲಿ 8ರಂತೆ ಒಟ್ಟು 124 ಗ್ಯಾಂಗ್‍ಮನ್‍ಗಳಿದ್ದಾರೆ. ಮಳೆಯಿಂದಾಗಿ ಮರಗಳು ಬಿದ್ದರೆ, ಕೂಡಲೇ ಸ್ಥಳಕ್ಕೆ ಧಾವಿಸಿ ಒಂದು ಗಂಟೆಯೊಳಗೆ ಮರಗಳನ್ನು ತೆರವು ಮಾಡುವಂತೆ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಬಿದ್ದ ಕೊಂಬೆಗಳನ್ನು ಸಾಗಿಸಲು ವಾಹನಗಳ ವ್ಯವಸ್ಥೆಯನ್ನೂ ಮಾಡಲಾಗಿದೆ. ಹೀಗಾಗಿ ಸಿಬ್ಬಂದಿಯನ್ನು ಬಳಸಿಕೊಂಡು ದೂರು ಬಂದ ಕೂಡಲೇ ಕಾರ್ಯಾಚರಣೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT