ಪ್ರತಾಪ್ ಸಿಂಹ 
ಜಿಲ್ಲಾ ಸುದ್ದಿ

ಪ್ರತಾಪ್ ಸಿಂಹ ವಿರುದ್ಧ ಜೀವ ಬೆದರಿಕೆ ಕೇಸ್, ತನಿಖೆ ಆರಂಭಿಸಿದ ಪೊಲೀಸರು

ಪತ್ರಕರ್ತನಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ್ ಅವರ ವಿರುದ್ಧ ಕದ್ರಿ ಪೊಲೀಸರು...

ಮಂಗಳೂರು: ಪತ್ರಕರ್ತನಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ್ ಅವರ ವಿರುದ್ಧ ಕದ್ರಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಗುರುವಾರದಿಂದ ತನಿಖೆ ಆರಂಭಿಸಿದ್ದಾರೆ.

ಸಬ್ ಇನ್ಸ್‌ಪೆಕ್ಟರ್ ರಫೀಕ್ ನೇತೃತ್ವದಲ್ಲಿ ಪ್ರಕರಣದ ತನಿಖೆ ಕೈಗೊಂಡಿರುವ ಕದ್ರಿ ಪೊಲೀಸರು, ಪ್ರಾಥಮಿಕ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಈ ಮಧ್ಯೆ, ಪ್ರತಾಪ್ ಸಿಂಹ ಅವರು ತಮ್ಮ ವಿರುದ್ಧ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದು, ನಾನು ಯಾವ ಪತ್ರಕರ್ತರಿಗೂ ಜೀವ ಬೆದರಿಕೆ ಹಾಕಿಲ್ಲ. ಇದು ಪ್ರಚಾರಕ್ಕಾಗಿ ಮಾಡಿರುವ ಆರೋಪ ಎಂದಿದ್ದರು.

ಬಾಲಿವುಡ್ ಸಲ್ಮಾನ್‌ ಖಾನ್‌ ಅವರಿಗೆ ಸಂಬಂಧಿಸಿದಂತೆ ಪ್ರತಾಪ್‌ ಸಿಂಹ ಫೇಸ್‌ಬುಕ್‌ ಖಾತೆಯಲ್ಲಿ ವ್ಯಕ್ತಿಪಡಿಸಿದ್ದ ಅಭಿಪ್ರಾಯ ಆಧರಿಸಿ ನಾನು ವರದಿ ಮಾಡಿದ್ದೆ. ಈ ಕುರಿತು ದೂರವಾಣಿ ಕರೆಮಾಡಿದ ಪ್ರತಾಪ್ ಸಿಂಹ ಅವರು, ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಕಾರ್ಯಕರ್ತರನ್ನು ಕಳುಹಿಸಿ ಕೈ ಕಾಲು ಕಡಿದು ಹಾಕಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪತ್ರಕರ್ತ ಶ್ರೇಯಸ್‌ ಎಚ್.ಎಸ್ ಅವರು ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಕುರಿತು ಎರಡನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದ ಪೊಲೀಸರು, ಸಂಸದರ ವಿರುದ್ಧ ಎಫ್‌ಐಆರ್‌ ದಾಖಲಿಸಲು ನ್ಯಾಯಾಧೀಶರಿಂದ ಅನುಮತಿ ಪಡೆದು, ಬಳಿಕ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 504 (ಅವಾಚ್ಯ ಶಬ್ದಗಳಿಂದ ನಿಂದನೆ) ಮತ್ತು ಸೆಕ್ಷನ್‌ 507ರ (ಜೀವ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT