ಬಿಬಿಎಂಪಿ ಕಚೇರಿ 
ಜಿಲ್ಲಾ ಸುದ್ದಿ

ಬಿಬಿಎಂಪಿ ವಿಭಜನೆಗೆ ಆರ್‍ಪಿಐ ವಿರೋಧ

ದಲಿತರು, ಹಿಂದುಳಿದವರ ಸಮಗ್ರ ಅಭಿವೃದ್ಧಿ ಮತ್ತು ಬೆಂಗಳೂರು ನಗರದ ಐಕ್ಯತೆಯ ದೃಷ್ಟಿಯಿಂದ ಬರುವ ಬಿಬಿಎಂಪಿ ಚುನಾವಣೆಯನ್ನು ದಲಿತ ಮತ್ತು ಕನ್ನಡಪರ ಸಂಘಟನೆಗಳು ಗಂಭೀರವಾಗಿ ಪರಿಗಣಿಸಲಿವೆ ಎಂದು ಭಾರತೀಯ ರಿಪಬ್ಲಿಕನ್ ಪಕ್ಷದ ರಾಜ್ಯಾಧ್ಯಕ್ಷ...

ಬೆಂಗಳೂರು: ದಲಿತರು, ಹಿಂದುಳಿದವರ ಸಮಗ್ರ ಅಭಿವೃದ್ಧಿ ಮತ್ತು ಬೆಂಗಳೂರು ನಗರದ ಐಕ್ಯತೆಯ ದೃಷ್ಟಿಯಿಂದ ಬರುವ ಬಿಬಿಎಂಪಿ ಚುನಾವಣೆಯನ್ನು ದಲಿತ ಮತ್ತು ಕನ್ನಡಪರ ಸಂಘಟನೆಗಳು ಗಂಭೀರವಾಗಿ ಪರಿಗಣಿಸಲಿವೆ ಎಂದು ಭಾರತೀಯ ರಿಪಬ್ಲಿಕನ್ ಪಕ್ಷದ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಹೇಳಿದರು.

ಡಾ. ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವದ ಅಂಗವಾಗಿ ಲಗ್ಗೆರೆ ಲಕ್ಷ್ಮೀದೇವಿ ನಗರದಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ಪಶ್ಚಿಮ ವಿಭಾಗದ ಆರ್‍ಪಿಐ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.ಕಾಂಗ್ರೆಸ್, ಬಿಜೆಪಿ ಸೇರಿದಂತೆ ಅಧಿಕಾರದ ರುಚಿ ಕಂಡ ಯಾವುದೇ ಪಕ್ಷಕ್ಕೂ ಬೆಂಗಳೂರು ನಗರದ ಐಕ್ಯತೆ ಮತ್ತು ಅಭಿವೃದ್ಧಿ ಬೇಕಾಗಿಲ್ಲ. ಅಭಿವೃದ್ಧಿ ನೆಪದಲ್ಲಿ ಜನರ ತೆರಿಗೆ ಹಣವನ್ನು ಲೂಟಿ ಹೊಡೆದ ಕುಖ್ಯಾತಿ ಎಲ್ಲ ಪಕ್ಷಗಳಿಗೂ ಅಂಟಿದೆ. ಮತ್ತೆ ಅದೇ ಪಕ್ಷಗಳು ಅಬಿsವೃದಿಟಛಿ ಸೋಗಿನಲ್ಲಿ ಜನತೆ ಮುಂದೆ ಬರಲಿವೆ. ಈ ಸಂದರ್ಭದಲ್ಲಿ ನಗರದ ಜನತೆ ತಕ್ಕ ಪಾಠ ಕಲಿಸಬೇಕಿದೆ ಎಂದರು.

ಭಾರತೀಯ ರಿಪಬ್ಲಿಕನ್ ಪಕ್ಷ ಬಿಬಿಎಂಪಿ ವಿಭಜನೆಯನ್ನು ತೀವ್ರವಾಗಿ ಖಂಡಿಸುತ್ತದೆ. ನಗರದ ಐಕ್ಯತೆ ದೃಷ್ಟಿಯಿಂದ ವಿಭಜನೆ ಮಾಡಬಾರದೆಂದು ಒತ್ತಾಯಿಸಿ ಈಗಾಗಲೇ ತಾವು ಹೋರಾಟ ನಡೆಸಿದ್ದೇವೆ. ಇದರ ಮುಂದುವರೆದ ಭಾಗವಾಗಿ ನಗರದ ಅಭಿವೃದ್ಧಿ ಮತ್ತು ಐಕ್ಯತೆಯನ್ನು ಪ್ರಧಾನವಾಗಿಟ್ಟುಕೊಂಡು ಚುನಾವಣೆ ಎದುರಿಸಲು ಸಿದ್ದತೆ ನಡೆಸಿದ್ದೇವೆ. ಪಾಲಿಕೆ ಎಲ್ಲ ವಾರ್ಡ್‍ಗಳಲ್ಲೂ ತಮ್ಮ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆಂದು ಹೇಳಿದರು.

ಸಮಾವೇಶಕ್ಕೂ ಮುನ್ನ ಅಂಬೇಡ್ಕರ್ ಜಯಂತ್ಯುತ್ಸವದ ಭೀಮರಥದ ಮೆರವಣಿಗೆಯು ಸೋನಾಲ್ ಗಾರ್ಮೆಂಟ್ಸ್ ಮುಂಭಾಗ ಆವರಣದಿಂದ ಲಕ್ಷ್ಮೀದೇವಿ ನಗರದವರೆಗೆ ಸಾಗಿ ಬಂತು. ನಂತರ ನಡೆದ ಸಮಾವೇಶದಲ್ಲಿ ಆರ್‍ಪಿಐ ಪಕ್ಷದ ಮುಖಂಡರಾದ ವೈ.ಎಸ್. ದೇವೂರ್,ಆರ್.ಎಂ.ಎನ್. ರಮೇಶ್, ವಕೀಲರ ಘಟಕದ ರಾಜ್ಯಾಧ್ಯಕ್ಷ ಅನಂತ್ ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT