ಬಿಬಿಎಂಪಿ ಕಚೇರಿ 
ಜಿಲ್ಲಾ ಸುದ್ದಿ

ಬಿಬಿಎಂಪಿ ವಿಭಜನೆಗೆ ಆರ್‍ಪಿಐ ವಿರೋಧ

ದಲಿತರು, ಹಿಂದುಳಿದವರ ಸಮಗ್ರ ಅಭಿವೃದ್ಧಿ ಮತ್ತು ಬೆಂಗಳೂರು ನಗರದ ಐಕ್ಯತೆಯ ದೃಷ್ಟಿಯಿಂದ ಬರುವ ಬಿಬಿಎಂಪಿ ಚುನಾವಣೆಯನ್ನು ದಲಿತ ಮತ್ತು ಕನ್ನಡಪರ ಸಂಘಟನೆಗಳು ಗಂಭೀರವಾಗಿ ಪರಿಗಣಿಸಲಿವೆ ಎಂದು ಭಾರತೀಯ ರಿಪಬ್ಲಿಕನ್ ಪಕ್ಷದ ರಾಜ್ಯಾಧ್ಯಕ್ಷ...

ಬೆಂಗಳೂರು: ದಲಿತರು, ಹಿಂದುಳಿದವರ ಸಮಗ್ರ ಅಭಿವೃದ್ಧಿ ಮತ್ತು ಬೆಂಗಳೂರು ನಗರದ ಐಕ್ಯತೆಯ ದೃಷ್ಟಿಯಿಂದ ಬರುವ ಬಿಬಿಎಂಪಿ ಚುನಾವಣೆಯನ್ನು ದಲಿತ ಮತ್ತು ಕನ್ನಡಪರ ಸಂಘಟನೆಗಳು ಗಂಭೀರವಾಗಿ ಪರಿಗಣಿಸಲಿವೆ ಎಂದು ಭಾರತೀಯ ರಿಪಬ್ಲಿಕನ್ ಪಕ್ಷದ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಹೇಳಿದರು.

ಡಾ. ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವದ ಅಂಗವಾಗಿ ಲಗ್ಗೆರೆ ಲಕ್ಷ್ಮೀದೇವಿ ನಗರದಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ಪಶ್ಚಿಮ ವಿಭಾಗದ ಆರ್‍ಪಿಐ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.ಕಾಂಗ್ರೆಸ್, ಬಿಜೆಪಿ ಸೇರಿದಂತೆ ಅಧಿಕಾರದ ರುಚಿ ಕಂಡ ಯಾವುದೇ ಪಕ್ಷಕ್ಕೂ ಬೆಂಗಳೂರು ನಗರದ ಐಕ್ಯತೆ ಮತ್ತು ಅಭಿವೃದ್ಧಿ ಬೇಕಾಗಿಲ್ಲ. ಅಭಿವೃದ್ಧಿ ನೆಪದಲ್ಲಿ ಜನರ ತೆರಿಗೆ ಹಣವನ್ನು ಲೂಟಿ ಹೊಡೆದ ಕುಖ್ಯಾತಿ ಎಲ್ಲ ಪಕ್ಷಗಳಿಗೂ ಅಂಟಿದೆ. ಮತ್ತೆ ಅದೇ ಪಕ್ಷಗಳು ಅಬಿsವೃದಿಟಛಿ ಸೋಗಿನಲ್ಲಿ ಜನತೆ ಮುಂದೆ ಬರಲಿವೆ. ಈ ಸಂದರ್ಭದಲ್ಲಿ ನಗರದ ಜನತೆ ತಕ್ಕ ಪಾಠ ಕಲಿಸಬೇಕಿದೆ ಎಂದರು.

ಭಾರತೀಯ ರಿಪಬ್ಲಿಕನ್ ಪಕ್ಷ ಬಿಬಿಎಂಪಿ ವಿಭಜನೆಯನ್ನು ತೀವ್ರವಾಗಿ ಖಂಡಿಸುತ್ತದೆ. ನಗರದ ಐಕ್ಯತೆ ದೃಷ್ಟಿಯಿಂದ ವಿಭಜನೆ ಮಾಡಬಾರದೆಂದು ಒತ್ತಾಯಿಸಿ ಈಗಾಗಲೇ ತಾವು ಹೋರಾಟ ನಡೆಸಿದ್ದೇವೆ. ಇದರ ಮುಂದುವರೆದ ಭಾಗವಾಗಿ ನಗರದ ಅಭಿವೃದ್ಧಿ ಮತ್ತು ಐಕ್ಯತೆಯನ್ನು ಪ್ರಧಾನವಾಗಿಟ್ಟುಕೊಂಡು ಚುನಾವಣೆ ಎದುರಿಸಲು ಸಿದ್ದತೆ ನಡೆಸಿದ್ದೇವೆ. ಪಾಲಿಕೆ ಎಲ್ಲ ವಾರ್ಡ್‍ಗಳಲ್ಲೂ ತಮ್ಮ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆಂದು ಹೇಳಿದರು.

ಸಮಾವೇಶಕ್ಕೂ ಮುನ್ನ ಅಂಬೇಡ್ಕರ್ ಜಯಂತ್ಯುತ್ಸವದ ಭೀಮರಥದ ಮೆರವಣಿಗೆಯು ಸೋನಾಲ್ ಗಾರ್ಮೆಂಟ್ಸ್ ಮುಂಭಾಗ ಆವರಣದಿಂದ ಲಕ್ಷ್ಮೀದೇವಿ ನಗರದವರೆಗೆ ಸಾಗಿ ಬಂತು. ನಂತರ ನಡೆದ ಸಮಾವೇಶದಲ್ಲಿ ಆರ್‍ಪಿಐ ಪಕ್ಷದ ಮುಖಂಡರಾದ ವೈ.ಎಸ್. ದೇವೂರ್,ಆರ್.ಎಂ.ಎನ್. ರಮೇಶ್, ವಕೀಲರ ಘಟಕದ ರಾಜ್ಯಾಧ್ಯಕ್ಷ ಅನಂತ್ ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT