ಬಿಬಿಎಂಪಿ ಕಚೇರಿ 
ಜಿಲ್ಲಾ ಸುದ್ದಿ

ಬಿಬಿಎಂಪಿ ವಿಭಜನೆಗೆ ಆರ್‍ಪಿಐ ವಿರೋಧ

ದಲಿತರು, ಹಿಂದುಳಿದವರ ಸಮಗ್ರ ಅಭಿವೃದ್ಧಿ ಮತ್ತು ಬೆಂಗಳೂರು ನಗರದ ಐಕ್ಯತೆಯ ದೃಷ್ಟಿಯಿಂದ ಬರುವ ಬಿಬಿಎಂಪಿ ಚುನಾವಣೆಯನ್ನು ದಲಿತ ಮತ್ತು ಕನ್ನಡಪರ ಸಂಘಟನೆಗಳು ಗಂಭೀರವಾಗಿ ಪರಿಗಣಿಸಲಿವೆ ಎಂದು ಭಾರತೀಯ ರಿಪಬ್ಲಿಕನ್ ಪಕ್ಷದ ರಾಜ್ಯಾಧ್ಯಕ್ಷ...

ಬೆಂಗಳೂರು: ದಲಿತರು, ಹಿಂದುಳಿದವರ ಸಮಗ್ರ ಅಭಿವೃದ್ಧಿ ಮತ್ತು ಬೆಂಗಳೂರು ನಗರದ ಐಕ್ಯತೆಯ ದೃಷ್ಟಿಯಿಂದ ಬರುವ ಬಿಬಿಎಂಪಿ ಚುನಾವಣೆಯನ್ನು ದಲಿತ ಮತ್ತು ಕನ್ನಡಪರ ಸಂಘಟನೆಗಳು ಗಂಭೀರವಾಗಿ ಪರಿಗಣಿಸಲಿವೆ ಎಂದು ಭಾರತೀಯ ರಿಪಬ್ಲಿಕನ್ ಪಕ್ಷದ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಹೇಳಿದರು.

ಡಾ. ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವದ ಅಂಗವಾಗಿ ಲಗ್ಗೆರೆ ಲಕ್ಷ್ಮೀದೇವಿ ನಗರದಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ಪಶ್ಚಿಮ ವಿಭಾಗದ ಆರ್‍ಪಿಐ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.ಕಾಂಗ್ರೆಸ್, ಬಿಜೆಪಿ ಸೇರಿದಂತೆ ಅಧಿಕಾರದ ರುಚಿ ಕಂಡ ಯಾವುದೇ ಪಕ್ಷಕ್ಕೂ ಬೆಂಗಳೂರು ನಗರದ ಐಕ್ಯತೆ ಮತ್ತು ಅಭಿವೃದ್ಧಿ ಬೇಕಾಗಿಲ್ಲ. ಅಭಿವೃದ್ಧಿ ನೆಪದಲ್ಲಿ ಜನರ ತೆರಿಗೆ ಹಣವನ್ನು ಲೂಟಿ ಹೊಡೆದ ಕುಖ್ಯಾತಿ ಎಲ್ಲ ಪಕ್ಷಗಳಿಗೂ ಅಂಟಿದೆ. ಮತ್ತೆ ಅದೇ ಪಕ್ಷಗಳು ಅಬಿsವೃದಿಟಛಿ ಸೋಗಿನಲ್ಲಿ ಜನತೆ ಮುಂದೆ ಬರಲಿವೆ. ಈ ಸಂದರ್ಭದಲ್ಲಿ ನಗರದ ಜನತೆ ತಕ್ಕ ಪಾಠ ಕಲಿಸಬೇಕಿದೆ ಎಂದರು.

ಭಾರತೀಯ ರಿಪಬ್ಲಿಕನ್ ಪಕ್ಷ ಬಿಬಿಎಂಪಿ ವಿಭಜನೆಯನ್ನು ತೀವ್ರವಾಗಿ ಖಂಡಿಸುತ್ತದೆ. ನಗರದ ಐಕ್ಯತೆ ದೃಷ್ಟಿಯಿಂದ ವಿಭಜನೆ ಮಾಡಬಾರದೆಂದು ಒತ್ತಾಯಿಸಿ ಈಗಾಗಲೇ ತಾವು ಹೋರಾಟ ನಡೆಸಿದ್ದೇವೆ. ಇದರ ಮುಂದುವರೆದ ಭಾಗವಾಗಿ ನಗರದ ಅಭಿವೃದ್ಧಿ ಮತ್ತು ಐಕ್ಯತೆಯನ್ನು ಪ್ರಧಾನವಾಗಿಟ್ಟುಕೊಂಡು ಚುನಾವಣೆ ಎದುರಿಸಲು ಸಿದ್ದತೆ ನಡೆಸಿದ್ದೇವೆ. ಪಾಲಿಕೆ ಎಲ್ಲ ವಾರ್ಡ್‍ಗಳಲ್ಲೂ ತಮ್ಮ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆಂದು ಹೇಳಿದರು.

ಸಮಾವೇಶಕ್ಕೂ ಮುನ್ನ ಅಂಬೇಡ್ಕರ್ ಜಯಂತ್ಯುತ್ಸವದ ಭೀಮರಥದ ಮೆರವಣಿಗೆಯು ಸೋನಾಲ್ ಗಾರ್ಮೆಂಟ್ಸ್ ಮುಂಭಾಗ ಆವರಣದಿಂದ ಲಕ್ಷ್ಮೀದೇವಿ ನಗರದವರೆಗೆ ಸಾಗಿ ಬಂತು. ನಂತರ ನಡೆದ ಸಮಾವೇಶದಲ್ಲಿ ಆರ್‍ಪಿಐ ಪಕ್ಷದ ಮುಖಂಡರಾದ ವೈ.ಎಸ್. ದೇವೂರ್,ಆರ್.ಎಂ.ಎನ್. ರಮೇಶ್, ವಕೀಲರ ಘಟಕದ ರಾಜ್ಯಾಧ್ಯಕ್ಷ ಅನಂತ್ ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣವಚನ ಡೌಟ್; ಮತ್ತೆ ಸಂಖ್ಯಾಬಲ ಇಲ್ಲ ಎಂದ ಗವರ್ನರ್!

Google Trends ನಲ್ಲಿಯೂ ವಿಜಯ್- TVK ಅರ್ಭಟ! ಮತಗಳು, ಗೆಲುವಿನ ಬಗ್ಗೆ ಹೆಚ್ಚಿನ ಹುಡುಕಾಟ

IPL 2026: ಫಿನ್ ಅಲೆನ್ ಶತಕದ ಅಬ್ಬರ, ಡೆಲ್ಲಿ ವಿರುದ್ಧ KKR ಗೆ 8 ವಿಕೆಟ್ ಗಳ ಭರ್ಜರಿ ಜಯ!

ಹೌದು 2025 ರ ಯುದ್ಧದಲ್ಲಿ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ವಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ 1 ವರ್ಷದ ಬಳಿಕ ಚೀನಾ ಒಪ್ಪಿಗೆ!

ಕಾಂಗ್ರೆಸ್‌ನ್ನು ಕಿತ್ತು ಹಾಕದೇ ಯುವಕರಿಗೆ ಉದ್ಯೋಗವಿಲ್ಲ! ನಿಖಿಲ್ ಕುಮಾರಸ್ವಾಮಿ ಕಿಡಿ

SCROLL FOR NEXT